ರಾಜ್ಯ

ಶಿರೂರು ಶ್ರೀಗಳ ಸಾವಿನ ಬೆನ್ನಲ್ಲೇ, ವೈರಲ್ ಆಗುತ್ತಿದೆ ಈ ವಿಡಿಯೋ!

Srinivasamurthy VN
ಉಡುಪಿ: ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತು ಎನ್ನಲಾಗುತ್ತಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದ್ದು, ವಿಡಿಯೋದಲ್ಲಿ ಶ್ರೀಗಳು ದೈವದೊಂದಿಗೆ ಅನುಚಿತ ವರ್ತನೆ ತೋರಿದರು. ಇದು ಅವರ ಸಾವಿಗೆ ಕಾರಣ ಎಂಬ ವಾದಗಳು ಹುಟ್ಟಿಕೊಂಡಿವೆ.
ಫೇಸ್ ಬುಕ್ ನಲ್ಲಿ ಹರಿದಾಡುತ್ತಿರುವ ವಿಡಿಯೋ ಪೋಸ್ಟ್ ನಲ್ಲಿರುವಂತೆ ಲಕ್ಷ್ಮೀವರ ತೀರ್ಥರು ಧರ್ಮದೈವವಾದ ಶ್ರೀಕೊಡಮಣಿತ್ತಾಯನ ಉಗ್ರಕೋಪಕ್ಕೆ ಗುರಿಯಾದರೇ ಎಂಬ ಪ್ರಶ್ನೆ ಎದುರಾಗಿದೆ. ಉಡುಪಿಯ ಪಡುಬಿದ್ರೆಯ ಬಾಲುಪೂಜಾರಿ ಎಂಬವರ ಕುಟುಂಬದ ಮನೆಯಲ್ಲಿ ನಡೆದ ಧರ್ಮನೇಮದ ಸಂದರ್ಭದಲ್ಲಿ ಸ್ವಾಮೀಜಿ ಅನುಚಿತ ವರ್ತನೆ ತೋರಿದ್ದರು ಎನ್ನಲಾಗಿದೆ. ಇದೇ ಘಟನೆ ಶ್ರೀಗಳ ಬದುಕಿಗೆ ಕುತ್ತಾಯಿತೇ ಎಂಬ ಪ್ರಶ್ನೆಗಳನ್ನು ಹಾಕಿ ಜನ ವೀಡಿಯೋ ಶೇರ್ ಮಾಡುತ್ತಿದ್ದಾರೆ.
ದರ್ಶನದಲ್ಲಿ ಇರುವಾಗ ಕೊಡಮಣಿತ್ತಾಯ ದೈವದ ಬಳಿ ಮಾತನಾಡುವ ಸ್ವಾಮೀಜಿ, ನೀನು ನನಗೆ ಏನು ಕೊಟ್ಟಿದ್ದೀಯ? ಏನೂ ಕೊಟ್ಟಿಲ್ಲ ಎಂದು ಸನ್ನೆ ಮಾಡಿದ್ದರು. ನಿನ್ನಿಂದ ಏನೂ ಸಹಾಯವಾಗಿಲ್ಲ ಎಂದು ದೈವದ ಮುಂದೆ ಶ್ರೀಗಳು ಹೇಳಿಕೊಂಡಿದ್ದರು ಎಂದು  ಹೇಳಿ ಹಲವರು ವಿಡಿಯೋ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ವಿಡಿಯೋ ಇದೀಗ ವ್ಯಾಪಕ ಶೇರ್ ಆಗುತ್ತಿದ್ದು, ವೈರಲ್ ಆಗಿದೆ.
SCROLL FOR NEXT