ಎಸ್ ಎ ರಾಮದಾಸ್ - ಪ್ರೇಮಕುಮಾರಿ 
ರಾಜ್ಯ

ಬಿಜೆಪಿ ಶಾಸಕ ರಾಮದಾಸ್‌ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಕುಮಾರಿ

ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಅವರು ತನಗೆ ಮದುವೆಯಾಗುದಾಗಿ ಹೇಳಿ ಮೋಸ ಮಾಡಿದ್ದಾರೆ ಎಂದು...

ಮೈಸೂರು: ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಅವರು ತನಗೆ ಮದುವೆಯಾಗುದಾಗಿ ಹೇಳಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಪ್ರೇಮಕುಮಾರಿ ಅವರು ಶಾಸಕರ ಕಚೇರಿ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ನಡೆದಿದೆ.
ಇಂದು ತಮ್ಮ ತಾಯಿ ಜೊತೆ ವಿದ್ಯರಣ್ಯಪುರದಲ್ಲಿರುವ ಬಿಜೆಪಿ ಶಾಸಕರ ಕಚೇರಿಗೆ ಆಗಮಿಸಿದ ಪ್ರೇಮಕುಮಾರಿ, ರಾಮದಾಸ್‌ ಅವರು ನನನ್ನು ಪ್ರೀತಿಸಿ, ಮದುವೆಯಾಗುತ್ತೇನೆ ಎಂದು ಮಾತು ಕೊಟ್ಟಿದ್ದರು. ಆದರೆ ಇದೀಗ ಕೊಟ್ಟ ಮಾತನ್ನು ತಪ್ಪಿದ್ದಾರೆ ಎಂದು ಆರೋಪಿಸಿ ವೇಲ್​ನಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಅವಾಂತರ ಸೃಷ್ಟಿಸಿದರು.
ಚುನಾವಣೆ ಸಂದರ್ಭ ನೀಡಿದ್ದ ಮಾತು ತಪ್ಪಿದ್ದಾರೆಂದು ಶಾಸಕರ ವಿರುದ್ಧ ಪ್ರೇಮಕುಮಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ನಾಮಪತ್ರ ತಡೆದಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. 
ಪೊಲೀಸರ ಮನವೊಲಿಕೆಗೂ ಬಗ್ಗದ ಪ್ರೇಮಕುಮಾರಿ, ನೆಲದ ಮೇಲೆ ಬಿದ್ದು ಉರುಳಾಡಿದ್ದಾರೆ. ಕೊನೆಗೆ ವಿದ್ಯಾರಣ್ಯಪುರಂ ಪೊಲೀಸರು ಪ್ರೇಮಕುಮಾರಿಯನ್ನು ವಶಕ್ಕೆ ಪಡೆದಕೊಂಡಿದ್ದಾರೆ. ಇನ್ನು ಶಾಸಕರ ಬೆಂಬಲಿಗರು ಪ್ರೇಮಕುಮಾರಿ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT