ಮಾಜಿ ಮ್ಯಾನೇಜರ್, ರಮ್ಯಾ ಶೆಟ್ಟಿ 
ರಾಜ್ಯ

ಶಿರೂರು ಶ್ರೀ ಸಾವಿಗೆ ರಮ್ಯಾ ಶೆಟ್ಟಿಯೇ ಕಾರಣ: ಮಠದ ಮಾಜಿ ಮ್ಯಾನೇಜರ್

ಕಳೆದ ಗುರುವಾರ ಅನುಮಾನಾಸ್ಪದವಾಗಿ ಮೃತಪಟ್ಟ ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಲಕ್ಷ್ಮೀವರ....

ಹಾಸನ: ಕಳೆದ ಗುರುವಾರ ಅನುಮಾನಾಸ್ಪದವಾಗಿ ಮೃತಪಟ್ಟ ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮಿಗಳ ಸಾವಿಗೆ ರಮ್ಯಾ ಶೆಟ್ಟಿ ಎಂಬ ಮಹಿಳೆಯೇ ಕಾರಣ ಎಂದು ಮಠದ ಮಾಜಿ ಮ್ಯಾನೇಜರ್​ ಸುನೀಲ್​ ಕುಮಾರ್​ ಅವರು ಆರೋಪಿಸಿದ್ದಾರೆ.
ಶಿರೂರು ಮಠದಲ್ಲಿ ಸ್ವಾಮೀಜಿ ಮಾತಿಗಿಂತ ರಮ್ಯಾ ಮಾತು ಹೆಚ್ಚಾಗಿ ನಡೆಯುತ್ತಿತ್ತು. ಆಕೆಯೇ ಮಠದ ಬ್ಯಾಂಕ್​ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಳು. ಮಠಕ್ಕೆ ತರಕಾರಿ ಸೇರಿದಂತೆ ಪ್ರತಿಯೊಂದು ವಸ್ತುವನ್ನೂ ಆಕೆಯೇ ತರುತ್ತಿದ್ದಳು. ಇಡೀ ಮಠವನ್ನು ರಮ್ಯಾ ಸ್ವಾಧೀನಕ್ಕೆ ಪಡೆದಿದ್ದರು ಎಂದು ಸುನೀಲ್​ ದೂರಿದ್ದಾರೆ.
ರಮ್ಯಾ ಸ್ವಾಮೀಜಿ ಬಳಿ ಒಬ್ಬಂಟಿಯಾಗಿ ರಾತ್ರಿ ವೇಳೆ ಮಠದಲ್ಲಿ ಇರುತ್ತಿದ್ದಳು. ಸ್ವಾಮೀಜಿ ರೂಂಗೆ ಯಾರು ಹೋಗುತ್ತಿರಲಿಲ್ಲ. ಆದರೆ, ರಮ್ಯಾ ಮಾತ್ರ ಹೋಗುತ್ತಿದ್ದಳು. ಮಠಕ್ಕೆ ಸೇರಿದ ನಂತರ ರಮ್ಯಾ ಮೈತುಂಬ ಬಂಗಾರ, ಕಾರು, 2 ಮನೆ ಸೇರಿ ಆಸ್ತಿ ಹೆಚ್ಚಾಯಿತು. ಆಕೆಯೇ ಸ್ವಾಮೀಜಿಗೆ ಹೊರಗಿನಿಂದ ಆಹಾರ ತಂದು ಕೊಡುತ್ತಿದ್ದಳು. ಮಠದಲ್ಲಿ ಇರುವ ಸಿಸಿ ಟಿವಿ ಪರೀಕ್ಷಿಸಿದರೆ ಸತ್ಯಾಂಶ ತಿಳಿಯಲಿದೆ ಎಂದು ಸುನೀಲ್​ ಹೇಳಿದ್ದಾರೆ.
ಒಂಭತ್ತು ವರ್ಷ ನಾನು ಹಾಗೂ ನನ್ನ ಕುಟುಂಬ ಮಠದಲ್ಲಿದ್ದವು. ಸ್ವಾಮೀಜಿ ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದರು. ಆದರೆ ರಮ್ಯಾ ಶೆಟ್ಟಿ ಬಂದ ನಂತರ ಮಠದ ವಾತಾವರಣವೇ ಬದಲಾಯಿತು. ರಮ್ಯಾ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಪೊಲೀಸರಿಗೆಗೆ ದೂರು ನೀಡಿ‌ ಕಿರುಕುಳ ನೀಡಿ ಮಠದಿಂದ ಹೊರ ಹಾಕಿದಳು. ಸೂಕ್ತ ತನಿಖೆ ನಡೆಸಿ ರಮ್ಯಾ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಸುನೀಲ್​ ಒತ್ತಾಯಿಸಿದ್ದಾರೆ.
ರಮ್ಯಾ ಶೆಟ್ಟಿಯನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT