ದೋಣಿಗಳಲ್ಲಿ ಸಂಚತರಿಸುತ್ತಿರುವ ಬಾಗಲಕೋಟೆ ಗ್ರಾಮಸ್ಥರು 
ರಾಜ್ಯ

ಬೆಳಗಾವಿಯಲ್ಲಿ ಪ್ರವಾಹ ಭೀತಿ: ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮಕ್ಕೆ ಸಚಿವರ ಸೂಚನೆ

ಮಹಾರಾಷ್ಟ್ರದ ಜಲಾಶಯಗಳಿಂದ ಅಧಿಕ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಕಾರಣ ಬೆಳಗಾವಿಯ ಹಲವು ಪ್ರದೇಶಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ, .

ಬೆಳಗಾವಿ: ಮಹಾರಾಷ್ಟ್ರದ  ಜಲಾಶಯಗಳಿಂದ ಅಧಿಕ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಕಾರಣ ಬೆಳಗಾವಿಯ ಹಲವು ಪ್ರದೇಶಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ, 
ಈ ಸಂಬಂಧ ಜಿಲ್ಲೆಯ ಹಿರಿಯ ಅಧಿಕಾರಿಗಳ ಜೊತೆ ಚಿಕ್ಕೋಡಿಯಲ್ಲಿ ಸಭೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ ಪ್ರವಾಹ ಸಂದರ್ಭ ಉಂಟಾದರೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಗಡಿ ಭಾಗದಲ್ಲಿರುವ ಜಲಾಶಯಗಳಿಂದ ಮಹಾರಾಷ್ಟ ಹೆಚ್ಚುವರಿ ನೀರು ಹರಿಸಿದ ವೇಳೆ ಈ ಭಾಗದಲ್ಲಿ ಹಲವು ಬಾರಿ ಪ್ರವಾಹ ಉಂಟಾಗಿದೆ.
ಕೋಯ್ನಾ ಸೇರಿದಂತೆ ಮಹಾರಾಷ್ಟ್ರದ ಹಲವು ನದಿಗಳು ತುಂಬಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಜಾರಕಿ ಹೊಳಿ ಹೇಳಿದ್ದಾರೆ, ಆಗಸ್ಟ್ 5ನೇ ವಾರದಲ್ಲಿ ಮಹಾರಾಷ್ಟ್ರ ನೀರು ಬಿಡುಗಡೆ ಮಾಡಿದರೇ ಬೆಳಗಾವಿ ಪರಿಸ್ಥಿತಿ ತೀರಾ ಚಿಂತಜನಕವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ  ಬಾಗಲಕೋಟೆ  ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ, ನಾವು ಹಲವು ವರ್ಷಗಳಿಂದ ಇಲ್ಲಿ ನೆಲೆಸಿದ್ದೇವೆ,  ಇಲ್ಲಿ ಕೃಷಿ ಮಾಡಿಕೊಂಡು ನಾವು ಅದರಿಂದ ಬಂದ ಹಣದಲ್ಲಿ ಊಟ ಮಾಡುತ್ತಿದ್ದೇವೆ,  ಇಲ್ಲಿಂದ ಹೋಗಿ ಬೇರೆ ಕಡೆ ನೆಲೆಸುವುದು ಕಷ್ಟಸಾಧ್ಯ ಎಂದು ಸಾಲ್ಗುಂದಿ ಗ್ರಾಮದ ರೈತ ರಾಮಪ್ಪ ಗೋನಿ ತಿಳಿಸಿದ್ದಾರೆ, ಬಾಗಲಕೋಟೆಯ ಸುಮಾರು 50 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!