ಸಂಗ್ರಹ ಚಿತ್ರ 
ರಾಜ್ಯ

ಖ್ಯಾತ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಉಡುಪಿ ಸರ್ಕಾರಿ ಶಾಲಾ ಶಿಕ್ಷಕನಿಗೆ ಸಲಾಂ ಅಂದಿದ್ದು ಯಾಕೆ ಗೊತ್ತ!

ಉಡುಪಿ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರ ಕೆಲಸಕ್ಕೆ ಫಿದಾ ಆಗಿರುವ ಭಾರತದ ಖ್ಯಾತ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ತಮ್ಮ ಟ್ವೀಟರ್ ನಲ್ಲಿ ಶಿಕ್ಷಕರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ...

ಹೈದರಾಬಾದ್: ಉಡುಪಿ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರ ಕೆಲಸಕ್ಕೆ ಫಿದಾ ಆಗಿರುವ ಭಾರತದ ಖ್ಯಾತ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ತಮ್ಮ ಟ್ವೀಟರ್ ನಲ್ಲಿ ಶಿಕ್ಷಕರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
ಉಡುಪಿ ಜಿಲ್ಲೆಯ ಬಾರಾಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರಾಗಿರುವ ರಾಜರಾಂ ಅವರು ವಿವಿಎಸ್ ಲಕ್ಷ್ಮಣ್ ಅವರು ಮೆಚ್ಚುಗೆಗೆ ಪಾತ್ರರಾದವರು. ಶಾಲೆಯಲ್ಲಿ ವಿಜ್ಞಾನ ಮತ್ತು ಗಣಿತ ಪಠ್ಯವನ್ನು ಬೋಧಿಸುವ ಇವರು ಶಾಲಾ ವಾಹನದ ಚಾಲಕನಾಗಿಯೂ ಕೆಲಸ ಮಾಡುತ್ತಿದ್ದಾರೆ. 
ರಾಜಾರಾಂ ಅವರು ಶಾಲೆಯಿಂದ ಸುಮಾರು ಆರು ಕಿ.ಮೀ ಆಸುಪಾಸಿನ ಮಕ್ಕಳನ್ನು ಪ್ರತಿನಿತ್ಯ ಕರೆತರುವ ಹಾಗೂ ವಾಪಸ್ ಮನೆಗಳಿಗೆ ಬಿಟ್ಟು ಬರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ರಾಜಾರಾಂ ಅವರು ಈ ಕಾರ್ಯವನ್ನು ಮೆಚ್ಚಿ ವಿವಿಎಸ್ ಲಕ್ಷ್ಮಣ್ ಅವರು ತಮ್ಮ ಟ್ವೀಟರ್ ನಲ್ಲಿ ಇದನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT