ಪೇಜಾವರ ಶ್ರೀ 
ರಾಜ್ಯ

ನನಗೆ ಮಕ್ಕಳಿರುವುದು ಸಾಬೀತಾದರೆ ಪೀಠತ್ಯಾಗ: ಪೇಜಾವರ ಶ್ರೀಗಳ ಬಹಿರಂಗ ಸವಾಲು

ನನಗೆ ಮಕ್ಕಳಿರುವುದು ಸಾಬೀತುಪಡಿಸಿದರೆ ಪೀಠತ್ಯಾಗ ಮಾಡುವುದಾಗಿ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ...

ಚೆನ್ನೈ/ಉಡುಪಿ: ನನಗೆ ಮಕ್ಕಳಿರುವುದು ಸಾಬೀತುಪಡಿಸಿದರೆ ಪೀಠತ್ಯಾಗ ಮಾಡುವುದಾಗಿ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. 
ಕಳೆದ ಗುರುವಾರ ಅನುಮಾನಾಸ್ಪದವಾಗಿ ಮೃತಪಟ್ಟ ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮಿಗಳು ಸಾವಿಗು ನಾಲ್ಕು ದಿನಗಳ ಮುನ್ನ ಮಾತನಾಡಿದ್ದರು ಎನ್ನಲಾದ ಆಡಿಯೋ ಟೇಪ್ ಬಿಡುಗಡೆಯಾಗಿದ್ದು ಇದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. 
ಇನ್ನು ಲಕ್ಷ್ಮೀವರ ತೀರ್ಥ ಸ್ವಾಮಿಗಳು ಆಡಿಯೋದಲ್ಲಿ ಪೇಜಾವರ ಶ್ರೀಗಳ ವಿರುದ್ಧವಾಗಿಯೂ ಮಾತನಾಡಿದ್ದರು. ಅಜ್ಜ(ಪೇಜಾವರ ಶ್ರೀ)ನಿಗೆ ಮೂವರು ಮಕ್ಕಳಿದ್ದಾರೆ. ಅವರಲ್ಲಿ ಒಬ್ಬರು ಡಾ. ಉಷಾ ಅಂತ. ಅವರು ಚೆನ್ನೈನಲ್ಲಿ ವೈದ್ಯರಾಗಿದ್ದಾರೆ. ಅಜ್ಜ ತಮಿಳುನಾಡಿನಲ್ಲಿ ಮಹಿಳೆ ಜತೆ ಸಂಬಂಧ ಹೊಂದಿದ್ದು ಅವರ ಇತ್ತೀಚಿಗೆ ತೀರಿಕೊಂಡಿದ್ದರು. ಹೀಗೆ ಹಲವು ವಿಚಾರಗಳ ಕುರಿತು ಶಿರೂರು ಶ್ರೀಗಳು ಆಡಿಯೋ ಟೇಪ್ ನಲ್ಲಿ ಮಾತನಾಡಿದ್ದರು. 
ಆಡಿಯೋ ಟೇಪ್ ನಲ್ಲಿನ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಪೇಜಾವರ ಮಠದ ವಿಶ್ವೇಶ್ವರತೀರ್ಥ ಶ್ರೀಗಳು ಮಾಧ್ಯಮ ಪ್ರಕಟಣೆ ನೀಡಿದ್ದು ತಮ್ಮ ವಿರುದ್ಧ ಆರೋಪಗಳು ಶುದ್ಧ ಸುಳ್ಳು ಎಂದು ಹೇಳಿದ್ದಾರೆ. 
ತಾರುಣ್ಯದಲ್ಲಿ ಮಹಿಳೆಯರ ಜತೆ ನನಗೆ ಸಹವಾಸವಿತ್ತು ಎನ್ನುವುದು ಶುದ್ಧ ಸುಳ್ಳು. ತಮಿಳುನಾಡಿನಲ್ಲಿ ನನಗೆ ಮಗಳಿದ್ದಾಳೆ ಅನ್ನೋದು ಕಟ್ಟುಕಥೆ. ಇದೇ ಅಭಿಪ್ರಾಯ ಹೇಳಿ ಕೆಲವರು ನನಗೆ ಪತ್ರ ಬರೆದಿದ್ದರು. ಪತ್ರದಲ್ಲಿ ನನಗೆ ಗಂಡು ಮಗು ಇದೆ ಎಂದು ಬರೆಯಲಾಗಿತ್ತು. ಇದೆಲ್ಲವೂ ಕೇವಲ ಕಲ್ಪನೆ, ಯಾರೊಬ್ಬರೂ ನಂಬುವುದಿಲ್ಲ. ಈ ಸಂಬಂಧ ಯಾವುದೇ ಪರೀಕ್ಷೆ, ವಿಚಾರಣೆ ಎದುರಿಸಲು ನಾನು ಸಿದ್ಧ ಎಂದು ಹೇಳಿದ್ದು, ಒಂದು ವೇಳೆ ಆರೋಪ ಸಾಬೀತುಪಡಿಸಿದರೆ ನಾನು ಪೀಠತ್ಯಾಗ ಮಾಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT