ಪೇಜಾವರ ಶ್ರೀ 
ರಾಜ್ಯ

ನನಗೆ ಮಕ್ಕಳಿರುವುದು ಸಾಬೀತಾದರೆ ಪೀಠತ್ಯಾಗ: ಪೇಜಾವರ ಶ್ರೀಗಳ ಬಹಿರಂಗ ಸವಾಲು

ನನಗೆ ಮಕ್ಕಳಿರುವುದು ಸಾಬೀತುಪಡಿಸಿದರೆ ಪೀಠತ್ಯಾಗ ಮಾಡುವುದಾಗಿ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ...

ಚೆನ್ನೈ/ಉಡುಪಿ: ನನಗೆ ಮಕ್ಕಳಿರುವುದು ಸಾಬೀತುಪಡಿಸಿದರೆ ಪೀಠತ್ಯಾಗ ಮಾಡುವುದಾಗಿ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. 
ಕಳೆದ ಗುರುವಾರ ಅನುಮಾನಾಸ್ಪದವಾಗಿ ಮೃತಪಟ್ಟ ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮಿಗಳು ಸಾವಿಗು ನಾಲ್ಕು ದಿನಗಳ ಮುನ್ನ ಮಾತನಾಡಿದ್ದರು ಎನ್ನಲಾದ ಆಡಿಯೋ ಟೇಪ್ ಬಿಡುಗಡೆಯಾಗಿದ್ದು ಇದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. 
ಇನ್ನು ಲಕ್ಷ್ಮೀವರ ತೀರ್ಥ ಸ್ವಾಮಿಗಳು ಆಡಿಯೋದಲ್ಲಿ ಪೇಜಾವರ ಶ್ರೀಗಳ ವಿರುದ್ಧವಾಗಿಯೂ ಮಾತನಾಡಿದ್ದರು. ಅಜ್ಜ(ಪೇಜಾವರ ಶ್ರೀ)ನಿಗೆ ಮೂವರು ಮಕ್ಕಳಿದ್ದಾರೆ. ಅವರಲ್ಲಿ ಒಬ್ಬರು ಡಾ. ಉಷಾ ಅಂತ. ಅವರು ಚೆನ್ನೈನಲ್ಲಿ ವೈದ್ಯರಾಗಿದ್ದಾರೆ. ಅಜ್ಜ ತಮಿಳುನಾಡಿನಲ್ಲಿ ಮಹಿಳೆ ಜತೆ ಸಂಬಂಧ ಹೊಂದಿದ್ದು ಅವರ ಇತ್ತೀಚಿಗೆ ತೀರಿಕೊಂಡಿದ್ದರು. ಹೀಗೆ ಹಲವು ವಿಚಾರಗಳ ಕುರಿತು ಶಿರೂರು ಶ್ರೀಗಳು ಆಡಿಯೋ ಟೇಪ್ ನಲ್ಲಿ ಮಾತನಾಡಿದ್ದರು. 
ಆಡಿಯೋ ಟೇಪ್ ನಲ್ಲಿನ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಪೇಜಾವರ ಮಠದ ವಿಶ್ವೇಶ್ವರತೀರ್ಥ ಶ್ರೀಗಳು ಮಾಧ್ಯಮ ಪ್ರಕಟಣೆ ನೀಡಿದ್ದು ತಮ್ಮ ವಿರುದ್ಧ ಆರೋಪಗಳು ಶುದ್ಧ ಸುಳ್ಳು ಎಂದು ಹೇಳಿದ್ದಾರೆ. 
ತಾರುಣ್ಯದಲ್ಲಿ ಮಹಿಳೆಯರ ಜತೆ ನನಗೆ ಸಹವಾಸವಿತ್ತು ಎನ್ನುವುದು ಶುದ್ಧ ಸುಳ್ಳು. ತಮಿಳುನಾಡಿನಲ್ಲಿ ನನಗೆ ಮಗಳಿದ್ದಾಳೆ ಅನ್ನೋದು ಕಟ್ಟುಕಥೆ. ಇದೇ ಅಭಿಪ್ರಾಯ ಹೇಳಿ ಕೆಲವರು ನನಗೆ ಪತ್ರ ಬರೆದಿದ್ದರು. ಪತ್ರದಲ್ಲಿ ನನಗೆ ಗಂಡು ಮಗು ಇದೆ ಎಂದು ಬರೆಯಲಾಗಿತ್ತು. ಇದೆಲ್ಲವೂ ಕೇವಲ ಕಲ್ಪನೆ, ಯಾರೊಬ್ಬರೂ ನಂಬುವುದಿಲ್ಲ. ಈ ಸಂಬಂಧ ಯಾವುದೇ ಪರೀಕ್ಷೆ, ವಿಚಾರಣೆ ಎದುರಿಸಲು ನಾನು ಸಿದ್ಧ ಎಂದು ಹೇಳಿದ್ದು, ಒಂದು ವೇಳೆ ಆರೋಪ ಸಾಬೀತುಪಡಿಸಿದರೆ ನಾನು ಪೀಠತ್ಯಾಗ ಮಾಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT