ಸಂಗ್ರಹ ಚಿತ್ರ 
ರಾಜ್ಯ

ದೇಶದಲ್ಲಿಯೇ ಮೊದಲ ಬಾರಿಗೆ ಬಿಎಂಟಿಸಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಆನ್ ಲೈನ್ ಪಾಸ್

ಆನ್ ಲೈನ್ ರಿಯಾಯಿತಿ ಪಾಸ್ ಗಳಿಗೆ ವಿದ್ಯಾರ್ಥಿಗಳಿಂದ ವ್ಯಾಪಕ ಪ್ರತಿಕ್ರಿಯೆ ಸ್ವೀಕರಿಸಿರುವ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ನಿಗಮ) ಕಾಲೇಜು ವಿದ್ಯಾರ್ಥಿಗಳಿಗೆ ಆನ್ ಲೈನ್ ​​ವಿದ್ಯಾರ್ಥಿ ಬಸ್....

ಬೆಂಗಳೂರು: ಆನ್ ಲೈನ್ ರಿಯಾಯಿತಿ ಪಾಸ್ ಗಳಿಗೆ ವಿದ್ಯಾರ್ಥಿಗಳಿಂದ ವ್ಯಾಪಕ ಪ್ರತಿಕ್ರಿಯೆ ಸ್ವೀಕರಿಸಿರುವ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ನಿಗಮ) ಕಾಲೇಜು ವಿದ್ಯಾರ್ಥಿಗಳಿಗೆ ಆನ್ ಲೈನ್  ​​ವಿದ್ಯಾರ್ಥಿ ಬಸ್ ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಲು ತೀರ್ಮಾನಿಸಿದೆ. ಈ ಮೂಲಕ ಇಂತಹಾ ವ್ಯವಸ್ಥೆ ಜಾರಿಗೆ ತರುತ್ತಿರುವ ದೇಶದ ಮೊದಲ ಸಾರ್ವಜನಿಕ ಸಾರಿಗೆ ಸಂಸ್ಥೆ ಎನ್ನುವ ಹಿರಿಮೆ ಇದರದಾಗಲಿದೆ.
ಬಿಎಂಟಿಸಿ ಈ ಆನ್ ಲೈನ್ ಪಾಸ್ ಗಳನ್ನು ದಿನದ, ಮಾಸಿಕ ಹಾಗು  ಇ-ವ್ಯಾಲೆಟ್ ಬಸ್ ಪಾಸ್ ಗಳಿಗೆ ಸಹ ವಿಸ್ತರಿಸುವ ಉದ್ದೇಶ ಹೊಂದಿದೆ.
ವಿದ್ಯಾರ್ಥಿಗಳಿಂದ ಸ್ಮಾರ್ಟ್ ಕಾರ್ಡ್ ಪಾಸ್ ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಿದ ಅರ್ಜಿಗಳ ಸಂಖೆ ಕಳೆದ ಒಂದು ವಾರದಲ್ಲಿ ಒಂದು ಲಕ್ಷದಷ್ಟಾಗಿದೆ.  500 ಕ್ಕಿಂತ ಹೆಚ್ಚು ಸ್ಮಾರ್ಟ್ ಕಾರ್ಡ್ ಗಳನ್ನು ಶಾಲೆಗಳಿಗೆ ವಿತರಿಸಲಾಗುವುದು. ಕಳೆದ ಸಾಲಿನಲ್ಲಿ ಬಿಎಂಟಿಸಿ ಒಟ್ಟು 3.75 ಲಕ್ಷ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಗಳನ್ನು ವಿತರಿಸಿದೆ. ಈ ವರ್ಷದ ಆಗಸ್ಟ್ ಅಂತ್ಯಕ್ಕೆ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯನ್ನು ಪೂರ್ಣಗೊಳಿಸಲಿದ್ದೇವೆ ಎಂದು  ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್ ಹೇಳಿದ್ದಾರೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಹೊಸ ಸ್ಮಾರ್ಟ್ ಕಾರ್ಡ್ ಪಾಸ್ ಗಳನ್ನು ಪಡೆದುಕೊಳ್ಳಲಿದ್ದಾರೆ.ಆಗಸ್ಟ್ ನಿಂದ, ವಿದ್ಯಾರ್ಥಿಗಳು ಸ್ಮಾರ್ಟ್ ಕಾರ್ಡ್ ಪಾಸ್ ಗಳೊಡನೆ ಪ್ರಯಾಣಿಸಬೇಕಾಗುತ್ತದೆ, ಅವರು ತಮ್ಮ ಹಳೆಯ ಬಸ್ ಪಾಸ್ ಅನ್ನು ಇದಕ್ಕೆ ಬದಲಿಸಿಕೊಳ್ಳಬೇಕು. ಸ್ಮಾರ್ಟ್ ಕಾರ್ಡ್ ಪಾಸ್ ಗಳನ್ನು ಸ್ವೀಕರಿಸಿಅದ್ಸ್  ವಿದ್ಯಾರ್ಥಿಗಳು ಬಸ್ ಕಂಡಕ್ಟರ್ ಗಳಿಗೆ ಎಕ್ನಾಲೆಜ್ ಮೆಂಟ್ ಸಂಖ್ಯೆ ಹಾಗೂ  ಗುರುತಿನ ಚೀಟಿಗಳನ್ನು ತೋರಿಸಬೇಕಾಗುವುದು.ಗುರುತು ಸಂಖ್ಯೆಯು ಯುನಿಕ್ ಆಗಿದ್ದು ವಿದ್ಯಾರ್ಥಿಯು ತನ್ನ ಶಾಲೆ ಅಥವಾ ಕಾಲೇಜನ್ನು ಬದಲಿಸಲು ಯಾವ ಅಭ್ಯಂತರವಿರುವುದಿಲ್ಲ.
ಕಳೆದ ಒಂದು ವರ್ಷದಲ್ಲಿ ಬಿಎಂಟಿಸಿ  ಶಿಕ್ಷಣ ಇಲಾಖೆಯೊಂದಿಗೆ  ಸಾರಿಗೆ ಸಂಸ್ಥೆಯು ಸುಮಾರು 100 ಸಭೆಗಳನ್ನು ನಡೆಸಿದೆ.  ಸ್ಮಾರ್ಟ್ ಕಾರ್ಡ್ ಪಾಸ್ ವಿತರಣೆ ವಿಳಂಬದಿಂದಾಗಿ ಖಾಸಗಿ ಬಸ್ ಮಾಲೀಕರು ಯಾವುದೇ ಲಾಭ ಮಾಡಿಕೊಳ್ಳುವುದಿಲ್ಲ. ಖಾಸಗಿ ಬಸ್ ಪಾಸ್ ಗಳಿಗಿಂತ 10 ರಿಂದ 20 ಪಟ್ಟು ಕಡಿಮೆ ದರದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ದೊರೆಯುತ್ತದೆಂದು ಮೂಲಗಳು ಹೇಳಿದೆ.
ಸ್ಮಾರ್ಟ್ ಕಾರ್ಡ್ ಪಾಸ್ ಗಳ ವಿತರಣೆ ಪೂರ್ಣವಾದ ಬಳಿಕ ಬಿಎಂಟಿಸಿ ಮಾಸಿಕ ಬಸ್ ಪಾಸ್ ಹಾಗು ಇ-ವ್ಯಾಲೆಟ್ ಗಳನ್ನು ಸಹ ಆನ್ ಲೈನ್ ವ್ಯವಸ್ಥೆಯಡಿ ತರಲು ಯೋಜಿಸಿದೆ.ಸಪ್ಟೆಂಬರ್, ಅಕ್ಟೋಬರ್ ವೇಳೆಗೆ ಈ ವ್ಯವಸ್ಥೆ ಜಾರಿಗೆ ಬರುತ್ತಿದ್ದು ಯಾರು ಬಿಎಂಟಿಸಿಯಲ್ಲಿ ನಿತ್ಯ ಪ್ರಯಾಣ ಮಾಡುವರೋ ಅವರು ಈ ಯೋಜನೆಯಡಿ ಬರಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡನೆ; 1 ಲಕ್ಷ ರೂ ದಂಡ; 10 ವರ್ಷ ಶಿಕ್ಷೆ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನ ದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು!

ಗೋವಿಂದಾ... ಗೋವಿಂದ..: TTDಗೆ 10 ವರ್ಷ ಕೋಟ್ಯಾಂತರ ರೂ. ಪಂಗನಾಮ; "ರೇಷ್ಮೆ" ಹಗರಣದಿಂದ ಭಾರಿ ನಷ್ಟ, ಅವಮಾನ!

ಶಾಲೆಗಳಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಬೇಕು: ಸುಧಾ ಮೂರ್ತಿ ಸರ್ಕಾರಕ್ಕೆ ಒತ್ತಾಯ

SCROLL FOR NEXT