ಮಾಜಿ ಮ್ಯಾನೇಜರ್ ಸಂಪಿಗೆತ್ತಾಯ ಮತ್ತಿ ಲಕ್ಷ್ಮಿವರ ತೀರ್ಥ ಸ್ವಾಮೀಜಿ 
ರಾಜ್ಯ

ಶಿರೂರು ಮಠದ ಸ್ವಾಮೀಜಿ ಸಾವು ಪ್ರಕರಣ: ಮಾಜಿ ಮ್ಯಾನೇಜರ್ ಹಾಗೂ ಆಟೋ ಚಾಲಕನ ವಿಚಾರಣೆ

ಶಿರೂರು ಮಠದ ಶ್ರೀ ಲಕ್ಷ್ಮಿವರ ತೀರ್ಥ ಸ್ವಾಮಿಜಿ ನಿಗೂಡ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಮಠದ ಮಾಜಿ ಮ್ಯಾನೇಜರ್ ..

ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮಿವರ ತೀರ್ಥ ಸ್ವಾಮಿಜಿ ನಿಗೂಡ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಮಠದ ಮಾಜಿ ಮ್ಯಾನೇಜರ್ ಮತ್ತು ಸ್ವಾಮೀಜಿಗಳ ಜೊತೆ ಸಂಪರ್ಕವಿರಿಸಿಕೊಂಡಿದ್ದ ಆಟೋ ಚಾಲಕನ  ವಿಚಾರಣೆ ನಡೆಸಿದ್ದಾರೆ.
ಹಿರಿಯಡ್ಕದಲ್ಲಿರುವ ಶಿರೂರು ಮೂಲಮಠ ದ ಸಮೀಪದ ನಿವಾಸಿಗಳ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ,  ಪದೇ ಪದೇ ಸ್ವಾಮೀಜಿ ಭೇಟಿಗೆ ಬರುತ್ತಿದ್ದ ಕಿನ್ನಿಮೂಲ್ಕಿಯ ಫ್ಲಾಟ್ ನಲ್ಲಿರುವ ಮಹಿಳೆಯೊಬ್ಬರನ್ನು ಕೂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಮಠದ ಮಾಜಿ ಮ್ಯಾನೇಜರ್ ಸುನಿಲ್ ಸಂಪಿಗೆತ್ತಾಯ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ,  ಪ್ರಕರಣದ ಭಾಗವಾಗಿ ಶಂಕೆಯ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೂಡ ವಿಚಾರಣೆ ನಡೆಸಿರುವುದಾಗಿ ತಿಳಿಸಿದ್ದಾರೆ, ಮಣಿಪಾಲದ ಸಮೀಪವಿರುವ ದುಗಲಿಪಡುವಿನ ಆಟೋಚಾಲಕನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಸ್ವಾಮೀಜಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಆತನಿಗೆ ಸ್ವಾಮೀಜಿಗಳು ಹಣಕಾಸಿನ ಸಹಾಯ ಮಾಡಿ ಆಟೋ ಕೊಡಿಸಿದ್ದರು.
ಸ್ವಾಮೀಜಿ ಕುಡಿದ ಜ್ಯೂಸಿನ ಬಾಟಲ್ ನಲ್ಲಿ ವಿಷಕಾರಕ ಅಂಶವಿದ್ದು, ಅದು ಮಠದಲ್ಲಿ ಪತ್ತೆಯಾಗಿದೆ, ವಿಧಿ ವಿಜ್ಞಾಮನ ಪರೀಕ್ಷಾಲಯದ ವರದಿಗಾಗಿ ತಾವು ಕಾಯುತ್ತಿರುವುದಾಗಿ ಉಡುಪಿ ಎಸ್ ಪಿ ಲಕ್ಷ್ಮಣ್ ನಿಂಬರ್ಗಿ ತಿಳಿಸಿದ್ದಾರೆ. ಇನ್ನು ಒಂದು ಅಥವಾ ಎರಡು ದಿನದಲ್ಲಿ ವರದಿ ಬರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT