ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ 
ರಾಜ್ಯ

ಶಿರೂರು ಮಠದಲ್ಲಿ ಪತ್ತೆಯಾಗಿದೆ, ಮಧ್ಯದ ಬಾಟಲಿ, ಕಾಂಡೋಮ್ ಮತ್ತು ಸ್ಯಾನಿಟರಿ ಪ್ಯಾಡ್!

ಶಿರೂರು ಮಠದ ಲಕ್ಷ್ಮಿವರ ತೀರ್ಥ ಸ್ವಾಮೀಜಿ ನಿಗೂಡ ಸಾವಿನ ಪ್ರಕರಣ ಸಂಬಂಧ ಪಶ್ಚಿಮ ವಲಯ ಡಿಜಿಪಿ ಅರುಣ್ ಚಕ್ರವರ್ತಿ ಮಠಕ್ಕೆ ಭೇಟಿ ನೀಡಿದ್ದರು....

ಉಡುಪಿ: ಶಿರೂರು ಮಠದ ಲಕ್ಷ್ಮಿವರ ತೀರ್ಥ ಸ್ವಾಮೀಜಿ ನಿಗೂಡ ಸಾವಿನ ಪ್ರಕರಣ ಸಂಬಂಧ ಪಶ್ಚಿಮ ವಲಯ ಡಿಜಿಪಿ ಅರುಣ್ ಚಕ್ರವರ್ತಿ ಮಠಕ್ಕೆ ಭೇಟಿ ನೀಡಿದ್ದರು.
ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮಿಗಳ ಸಾವು ದಿನಕ್ಕೆ ಒಂದು ತಿರುವು ಪಡೆಯುತ್ತಿದ್ದು, ಮಠದ ಶ್ರೀಗಳ ಕೊಠಡಿಯಲ್ಲಿ ಕಾಂಡೋಮ್, ಸ್ಯಾನಿಟರಿ ಪ್ಯಾಡ್​ ಸೇರಿದಂತೆ ದುಬಾರಿ ಮದ್ಯಗಳು ಲಭ್ಯವಾಗಿದೆ.
ಕೃಷ್ಣಮಠದ ಪಕ್ಕದಲ್ಲಿರುವ ಶೀರೂರು ಮಠದಲ್ಲಿ ಪೊಲೀಸರು ತಪಾಸಣೆ ಕಾರ್ಯಕ್ಕೆ ಮುಂದಾಗಿದ್ದು, ಶ್ರೀಗಳ ಕೊಠಡಿಯಲ್ಲಿ ರಾಶಿರಾಶಿ ಮದ್ಯದ ಬಾಟಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.. ಈ ಕೊಠಡಿಗೆ ಶ್ರೀಗಳನ್ನು ಬಿಟ್ಟು ಮತ್ಯಾರು ತೆರಳುತ್ತಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಪ್ರಕರಣವನ್ನು ವಿವಿಧ ಆಯಾಮಗಳಿಂದ ತನಿಖೆ ಮಾಡುತ್ತಿದ್ದೇವೆ, ಶಿರೂರು ಮೂಲ ಮಠದಲ್ಲಿ ಅಳವಡಿಸಿದ್ದ ಕ್ಯಾಮೆರಾ ನಾಪತ್ತೆಯಾಗಿದ್ದು ಇನ್ನೂ ಪತ್ತೆಯಾಗಿಲ್ಲ. ಇದುವರೆಗೂ ಪ್ರಕರಣ ಸಂಬಂಧ ಯಾರನ್ನು ಬಂಧಿಸಿಲ್ಲ ಎಂದು ಐಜಿಪಿ ತಿಳಿಸಿದ್ದಾರೆ.
ಶಿರೂರು ಶ್ರೀ ಸಾವಿನ ಪ್ರಕರಣ ಸಂಬಂಧ ಮಹಿಳೆಯೊರ್ವಳನ್ನು ಬಂಧಿಸಲಾಗಿದೆ ಎಂಬ ಮಾಧ್ಯಮಗಳ ವರದಿಗೆ ಪ್ರತಿಕ್ರಿಯಿಸಿದ ಉಡುಪಿ ಎಸ್ ಪಿ ಲಕ್ಷ್ಣಣ್ ನಿಂಬರ್ಗಿ, ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT