ಗಿರೀಶ್ ಕಾರ್ನಾಡ್ 
ರಾಜ್ಯ

ಗೌರಿ ಲಂಕೇಶ ಹತ್ಯೆ ತನಿಖೆ: ಡೈರಿ ಜಪ್ತಿ, ಮೊದಲ ಟಾರ್ಗೆಟ್ ಗಿರೀಶ್ ಕಾರ್ನಾಡ್!

ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆಯಿಂದ ...

ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆಯಿಂದ ವಶಪಡಿಸಿಕೊಳ್ಳಲಾಗಿರುವ ಡೈರಿಯಲ್ಲಿ ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಮೊದಲ ಟಾರ್ಗೆಟ್ ಆಗಿದ್ದರು ಎಂಬ ಆಘಾತಕಾರಿ ಅಂಶ ಪತ್ತೆಯಾಗಿದೆ.
ವಿಚಾರವಾದಿಗಳ ಹತ್ಯೆಗೆ ದೊಡ್ಡ ಪಟ್ಟಿಯನ್ನೇ ಮಾಡಿಕೊಂಡಿದ್ದ ಹಂತಕರು ಗಿರೀಶ್ ಕಾರ್ನಾಡ್ ರನ್ನು ಮೊದಲು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಎರಡನೇ ಸ್ಥಾನದಲ್ಲಿದ್ದ ಗೌರಿ ಲಂಕೇಶ್ ಅವರು ಹಂತಕರ ಗುಂಡಿಗೆ ಬಲಿಯಾದರು ಎಂದು ಎಸ್ ಐಟಿ ತನಿಖೆ ವೇಳೆ ಬಹಿರಂಗವಾಗಿದೆ.
ಪುಣೆ ನಿವಾಸಿ ಹಾಗೂ ಹಿಂದೂ ಜಾಗರಣ ವೇದಿಕೆ ನಾಯಕ ಅಮೋಲ್ ಕಾಳೆ ಬಳಿಯಿದ್ದ ಡೈರಿಯಿಂದ ಈ ವಿಚಾರ ಬಹಿರಂಗವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಡೈರಿಯಲ್ಲಿ ವಿಚಾರವಾದಿಗಳ ಹೆಸರನ್ನು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದ್ದು, ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್, ಸಾಹಿತಿ ಹಾಗೂ ರಾಜಕಾರಣಿ ಬಿಟಿ ಲಲಿತಾ ನಾಯಕ್, ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ, ಪ್ರಗತಿಪರ ಚಿಂತಕ ಸಿಎಸ್ ದ್ವಾರಕನಾಥ್ ಅವರು ಹಿಟ್ ಲಿಸ್ಟ್ ನಲ್ಲಿದ್ದರು ಎಂದು ಎಸ್ಐಟಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆರೋಪಿಗಳಿಂದ ಎಸ್ ಐಟಿ ಅಧಿಕಾರಿಗಳು ಡೈರಿಯೊಂದು ವಶಪಡಿಸಿಕೊಂಡಿದ್ದು, ಅದರಲ್ಲಿ ಈ ಸಾಹಿತಿಗಳ ಮತ್ತು ಪ್ರಗತಿಪರರ ಹೆಸರು ಬರೆಯಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಡೈರಿಯಲ್ಲಿ ಕೆಲವು ಕೋಡ್ ವರ್ಡ್ ಗಳನ್ನು ಬಳಸಲಾಗಿದ್ದು, ಅವುಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT