ಭೀಕರ ಅಪಘಾತ, ಕಟೀಲು ಅರ್ಚಕರ ಪುತ್ರ ಸೇರಿ ಇಬ್ಬರು ವಿದ್ಯಾರ್ಥಿಗಳ ಸಾವು 
ರಾಜ್ಯ

ಬೆಂಗಳೂರು: ಭೀಕರ ಅಪಘಾತ, ಕಟೀಲು ಅರ್ಚಕರ ಪುತ್ರ ಸೇರಿ ಇಬ್ಬರು ವಿದ್ಯಾರ್ಥಿಗಳ ಸಾವು

ಮಂಗಳವಾರ ತಡರಾತ್ರಿ ಕೆಎಸ್​ಆರ್​ಟಿಸಿ ಬಸ್​, ಕ್ಯಾಂಟರ್​ ನಡುವೆ ಕಾರೊಂದು ಸಿಲುಕಿದ್ದು ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ತುಮಕೂರು ....

ಬೆಂಗಳೂರು: ಮಂಗಳವಾರ ತಡರಾತ್ರಿ ಕೆಎಸ್​ಆರ್​ಟಿಸಿ ಬಸ್​, ಕ್ಯಾಂಟರ್​ ನಡುವೆ ಕಾರೊಂದು ಸಿಲುಕಿದ್ದು ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಕಟೀಲು ದುರ್ಗಾಪರಮೇಶ್ವರಿ ದೇವಾಲಯಣ ಅನುವಂಶಿಕ ಅರ್ಚಕರಾದ ಹರಿನಾರಾಯಣ ಅಸ್ರಣ್ಣ ಅವರ ಪುತ್ರ ಶ್ರೀನಿಧಿ ಅಸ್ರಣ್ಣ(21) ಹಾಗೂ ತುಮಕೂರಿನ  ಪ್ರಜ್ವಲ್​ (20), ಎಂದು ಗುರುತಿಸಲಾಗಿದೆ.
ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಇವರು ತಮ್ಮ ಇನ್ನಿಬ್ಬರು ಸ್ನೇಹಿತರೊಡನೆ ಪ್ರಾಜಕ್ಟ್ ವಿಚಾರವಾಗಿ ಬೆಂಗಳೂರಿಗೆ ಆಗಮಿಸಿದ್ದರು. 
ತುಮಕೂರು ರಸ್ತೆ ಟಿ.ಬೇಗೂರು ಸಮೀಪ ತಾಳೆಕೆರೆ ಕ್ರಾಸ್​ಬಳಿ ಕೆಎಸ್​ಆರ್​ಟಿಸಿ ಬಸ್​ ಹಾಗೂ ಕ್ಯಾಂಟರ್ ನಡುವೆ ಈ ವಿದ್ಯಾರ್ಥಿಗಳಿದ್ದ ಕಾರು ಸಿಕ್ಕಿಹಾಕಿಕೊಂಡಿದೆ. ಕಾರಿನಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿಗಳಾದ ಮೂಡಬಿದಿರೆಯ ಶರತ್ ಬಂಡಾರಿ ಮತ್ತು ಕಟೀಲಿನ ಶರತ್ ರಾಮ್ ದಾಸ್​ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿದ್ಯಾರ್ಥಿಗಳು ಬೆಂಗಳೂರು ಕೆಂಗೇರಿಯ ಆರ್​ಎನ್​ಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರೆಂದು ತಿಳಿದುಬಂದಿದೆ.
ಸ್ನೇಹಿತನನ್ನು ಮನೆಗೆ ಬಿಡಲೆಂದು  ಕಾರಿನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಮೊದಲು ಕ್ಯಾಂಟರ್ ಗೆ ಗುದ್ದಿ ಬಳಿಕ ಬಸ್ ಗೆ ಡಿಕ್ಕಿಯಾಗಿದೆ, ಈ ನಡುವೆ ಬಸ್ ಹಾಗೂ ಕ್ಯಾಂಟರ್ ಮುಖಾಮುಖಿಯಾಗಿದ್ದು ಕಾರು ಅವುಗಳ ನಡುವೆ ಸಿಕ್ಕು ನುಜ್ಜುಗುಜ್ಜಾಗಿದೆ.. 
ಅಪಘಾತಕ್ಕೀಡಾದ ಬಸ್ ನರಗುಂದ ಡಿಪೋಗೆ ಸೇರಿದ್ದು ಬೆಂಗಳೂರಿಗೆ ಆಗಮಿಸುತ್ತಿತ್ತು.
ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT