ಸಾಂದರ್ಭಿಕ ಚಿತ್ರ 
ರಾಜ್ಯ

ಉತ್ತಮ ಮಳೆ, ಪ್ರವಾಹ ಹೊರತಾಗಿಯೂ ಉತ್ತರ ಕರ್ನಾಟಕದಲ್ಲಿ ಜಲಕ್ಷಾಮದ ಭೀತಿ

ಜಲಾನಯನ ಪ್ರದೇಶಗಳಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದರೂ ಕೂಡ ರಾಜ್ಯದ 30 ಜಿಲ್ಲೆಗಳ ಪೈಕಿ ...

ಬೆಂಗಳೂರು: ಜಲಾನಯನ ಪ್ರದೇಶಗಳಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದರೂ ಕೂಡ ರಾಜ್ಯದ 30 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ತುಂತುರು ಮಳೆಯಿಂದಾಗಿ ಬರಗಾಲ ಉಂಟಾಗುವ ಸಾಧ್ಯತೆಯಿದೆ. ಇನ್ನೊಂದು ವಾರ ತುಂತುರು ಮಳೆ ಬೀಳುವ ಸಾಧ್ಯತೆಯಿರುವುದರಿಂದ ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದ ರೈತ ಸಮುದಾಯದಲ್ಲಿ ಆತಂಕ ಮನೆಮಾಡಿದೆ. ಜಲಕ್ಷಾಮ ಉಂಟಾಗಿ ಇದು ಖಾರಿಫ್ ಬೆಳೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ನದಿ ಮತ್ತು ಜಲಾನಯನ ತೀರ ಪ್ರದೇಶಗಳ ಕೃಷಿ ಭೂಮಿ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಯಿದೆ. ರಾಜ್ಯದಲ್ಲಿ ಜಲಾನಯನ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಶೇಕಡಾ 75 ಭಾಗವನ್ನು ಒಳಗೊಂಡಿದೆ. ಹಿಮಾಲಯ ಪ್ರದೇಶಗಳಲ್ಲಿ ಮಾನ್ಸೂನ್ ಪ್ರಬಲಗೊಂಡಿದ್ದರಿಂದ ಇದುವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು.

ಮುಂಗಾರು ಮಳೆ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರದ ನಿರ್ದೇಶಕ ಜಿ ಎಸ್ ಶ್ರೀನಿವಾಸ್ ರೆಡ್ಡಿ, ರಾಜ್ಯದ ಬಹುತೇಕ ಅಣೆಕಟ್ಟುಗಳು ತುಂಬಿರುವುದರಿಂದ ಬರಗಾಲ ಪರಿಸ್ಥಿತಿ ಉಂಟಾಗುವುದಿಲ್ಲ. ಆದರೆ ತುಂತುರು ಮಳೆ ಮತ್ತು ಮಳೆಯು ಸಮಾನವಾಗಿ ಎಲ್ಲಾ ಜಿಲ್ಲೆಗಳಿಗೆ ವ್ಯಾಪಿಸದಿದ್ದರೆ ಇದರಿಂದ ಕೃಷಿ ಚಟುವಟಿಕೆಗಳಿಗೆ ಬರಗಾಲ ಉಂಟಾಗುವ ಸಾಧ್ಯತೆಯಿದೆ ಎಂದರು.

ಮಣ್ಣಿನ ತೇವಾಂಶ ಮಟ್ಟ ಕೂಡ ಕುಸಿದಿರುವುದು ಕೃಷಿಯಲ್ಲಿ ಬರಗಾಲ ತಲೆದೋರುವುದರ ಮತ್ತೊಂದು ಅಂಶವಾಗಿದೆ.

ಮಲೆನಾಡು ಪ್ರದೇಶಗಳು ಮತ್ತು ನದಿಗಳಿರುವ ಸುತ್ತಮುತ್ತಲ ಪ್ರದೇಶಗಳಲ್ಲಿ ಮಣ್ಣಿನಲ್ಲಿ ತೇವಾಂಶ ಮಟ್ಟ ಕಡಿಮೆಯಾಗಿದೆ. ಜೂನ್ ತಿಂಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳು ಉತ್ತಮ ಮಳೆ ಕಂಡಿದ್ದರೂ ಸಹ 16 ಜಿಲ್ಲೆಗಳಲ್ಲಿ ಜುಲೈ ತಿಂಗಳಲ್ಲಿ ಮಳೆ ಕೊರತೆಯುಂಟಾಗಿದೆ. 10 ಜಿಲ್ಲೆಗಳು ಉತ್ತರ ಕರ್ನಾಟಕ ಭಾಗದಲ್ಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಮಳೆಯ ಕೊರತೆಯುಂಟಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಅಪರ ನಿರ್ದೇಶಕ ಸಿ ಎಸ್ ಪಾಟೀಲ್, ರಾಜ್ಯದ ಪಶ್ಚಿಮ ಭಾಗದಲ್ಲಿ ಮಾತ್ರ ಸಾಕಷ್ಟು ಮಳೆಯಾಗಿದೆ. ಪೂರ್ವ ವಲಯದಲ್ಲಿ ಸಾಕಷ್ಟು ಮಳೆಯಾಗಿಲ್ಲ. ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ಇತರ ಭಾಗಗಳಲ್ಲಿ ಕೃಷಿ ಭೂಮಿಗಳಲ್ಲಿ ಬರಗಾಲ ಉಂಟಾಗುವ ಸಾಧ್ಯತೆಯಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT