ಸಾಂದರ್ಭಿಕ ಚಿತ್ರ 
ರಾಜ್ಯ

ಉತ್ತಮ ಮಳೆ, ಪ್ರವಾಹ ಹೊರತಾಗಿಯೂ ಉತ್ತರ ಕರ್ನಾಟಕದಲ್ಲಿ ಜಲಕ್ಷಾಮದ ಭೀತಿ

ಜಲಾನಯನ ಪ್ರದೇಶಗಳಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದರೂ ಕೂಡ ರಾಜ್ಯದ 30 ಜಿಲ್ಲೆಗಳ ಪೈಕಿ ...

ಬೆಂಗಳೂರು: ಜಲಾನಯನ ಪ್ರದೇಶಗಳಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದರೂ ಕೂಡ ರಾಜ್ಯದ 30 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ತುಂತುರು ಮಳೆಯಿಂದಾಗಿ ಬರಗಾಲ ಉಂಟಾಗುವ ಸಾಧ್ಯತೆಯಿದೆ. ಇನ್ನೊಂದು ವಾರ ತುಂತುರು ಮಳೆ ಬೀಳುವ ಸಾಧ್ಯತೆಯಿರುವುದರಿಂದ ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದ ರೈತ ಸಮುದಾಯದಲ್ಲಿ ಆತಂಕ ಮನೆಮಾಡಿದೆ. ಜಲಕ್ಷಾಮ ಉಂಟಾಗಿ ಇದು ಖಾರಿಫ್ ಬೆಳೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ನದಿ ಮತ್ತು ಜಲಾನಯನ ತೀರ ಪ್ರದೇಶಗಳ ಕೃಷಿ ಭೂಮಿ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಯಿದೆ. ರಾಜ್ಯದಲ್ಲಿ ಜಲಾನಯನ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಶೇಕಡಾ 75 ಭಾಗವನ್ನು ಒಳಗೊಂಡಿದೆ. ಹಿಮಾಲಯ ಪ್ರದೇಶಗಳಲ್ಲಿ ಮಾನ್ಸೂನ್ ಪ್ರಬಲಗೊಂಡಿದ್ದರಿಂದ ಇದುವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು.

ಮುಂಗಾರು ಮಳೆ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರದ ನಿರ್ದೇಶಕ ಜಿ ಎಸ್ ಶ್ರೀನಿವಾಸ್ ರೆಡ್ಡಿ, ರಾಜ್ಯದ ಬಹುತೇಕ ಅಣೆಕಟ್ಟುಗಳು ತುಂಬಿರುವುದರಿಂದ ಬರಗಾಲ ಪರಿಸ್ಥಿತಿ ಉಂಟಾಗುವುದಿಲ್ಲ. ಆದರೆ ತುಂತುರು ಮಳೆ ಮತ್ತು ಮಳೆಯು ಸಮಾನವಾಗಿ ಎಲ್ಲಾ ಜಿಲ್ಲೆಗಳಿಗೆ ವ್ಯಾಪಿಸದಿದ್ದರೆ ಇದರಿಂದ ಕೃಷಿ ಚಟುವಟಿಕೆಗಳಿಗೆ ಬರಗಾಲ ಉಂಟಾಗುವ ಸಾಧ್ಯತೆಯಿದೆ ಎಂದರು.

ಮಣ್ಣಿನ ತೇವಾಂಶ ಮಟ್ಟ ಕೂಡ ಕುಸಿದಿರುವುದು ಕೃಷಿಯಲ್ಲಿ ಬರಗಾಲ ತಲೆದೋರುವುದರ ಮತ್ತೊಂದು ಅಂಶವಾಗಿದೆ.

ಮಲೆನಾಡು ಪ್ರದೇಶಗಳು ಮತ್ತು ನದಿಗಳಿರುವ ಸುತ್ತಮುತ್ತಲ ಪ್ರದೇಶಗಳಲ್ಲಿ ಮಣ್ಣಿನಲ್ಲಿ ತೇವಾಂಶ ಮಟ್ಟ ಕಡಿಮೆಯಾಗಿದೆ. ಜೂನ್ ತಿಂಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳು ಉತ್ತಮ ಮಳೆ ಕಂಡಿದ್ದರೂ ಸಹ 16 ಜಿಲ್ಲೆಗಳಲ್ಲಿ ಜುಲೈ ತಿಂಗಳಲ್ಲಿ ಮಳೆ ಕೊರತೆಯುಂಟಾಗಿದೆ. 10 ಜಿಲ್ಲೆಗಳು ಉತ್ತರ ಕರ್ನಾಟಕ ಭಾಗದಲ್ಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಮಳೆಯ ಕೊರತೆಯುಂಟಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಅಪರ ನಿರ್ದೇಶಕ ಸಿ ಎಸ್ ಪಾಟೀಲ್, ರಾಜ್ಯದ ಪಶ್ಚಿಮ ಭಾಗದಲ್ಲಿ ಮಾತ್ರ ಸಾಕಷ್ಟು ಮಳೆಯಾಗಿದೆ. ಪೂರ್ವ ವಲಯದಲ್ಲಿ ಸಾಕಷ್ಟು ಮಳೆಯಾಗಿಲ್ಲ. ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ಇತರ ಭಾಗಗಳಲ್ಲಿ ಕೃಷಿ ಭೂಮಿಗಳಲ್ಲಿ ಬರಗಾಲ ಉಂಟಾಗುವ ಸಾಧ್ಯತೆಯಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT