ಚಂದ್ರ ಗ್ರಹಣ-ಗ್ರಾಮ 
ರಾಜ್ಯ

ಚಂದ್ರ ಗ್ರಹಣ: ರಕ್ತಕಾರಿ ಸಾಯುತ್ತೀರಾ, ಜ್ಯೋತಿಷಿ ಮಾತು ಕೇಳಿ ರಾತ್ರೋರಾತ್ರಿ ಗ್ರಾಮ ತೊರೆದ 60 ಕುಟುಂಬ!

ಈ ಶತಮಾನದ ಸುದೀರ್ಘ ಚಂದ್ರ ಗ್ರಹಣ ಇಂದು ಸಂಭವಿಸುತ್ತಿದ್ದು ಇಂದಿನ ಚಂದ್ರ ಗ್ರಹಣದಿಂದ ಗ್ರಾಮದಲ್ಲಿ ಕೇಡು ಸಂಭವಿಸುತ್ತದೆ ಎಂದು ಜ್ಯೋತಿಷಿ...

ಚಿಕ್ಕಮಗಳೂರು: ಈ ಶತಮಾನದ ಸುದೀರ್ಘ ಚಂದ್ರ ಗ್ರಹಣ ಇಂದು ಸಂಭವಿಸುತ್ತಿದ್ದು ಇಂದಿನ ಚಂದ್ರ ಗ್ರಹಣದಿಂದ ಗ್ರಾಮದಲ್ಲಿ ಕೇಡು ಸಂಭವಿಸುತ್ತದೆ ಎಂದು ಜ್ಯೋತಿಷಿ ಹೇಳಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ರಾತ್ರೋರಾತ್ರಿ ಗ್ರಾಮವನ್ನೇ ತೊರೆದು ಹೊಲಸೆ ಹೋಗಿವೆ. 
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರ ಗ್ರಹಣ ವೇಳೆ ನೀವು ಗ್ರಾಮವನ್ನು ತೊರೆಯದಿದ್ದರೆ ರಕ್ತಕಾರಿ ಸಾಯುತ್ತೀರಾ ಎಂದು ಹೆದರಿಸಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ತಾವು ಸಾಕಿದ್ದ ಜಾನುವಾರುಗಳನ್ನು ಬಿಟ್ಟು ರಾತ್ರೋರಾತ್ರಿ ಗ್ರಾಮವನ್ನು ತೊರೆದ್ದು ಗುಳೆ ಹೊರಟು ಹೋಗಿದ್ದಾರೆ. 
ಕೇರಳ ಮೂಲದ ಜ್ಯೋತಿಷಿಯೊಬ್ಬ ಈ ರೀತಿ ಹೆದರಿಸಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ತಾವು ಮತ್ತೆಂದು ಈ ಗ್ರಾಮಕ್ಕೆ ಬರದಿರಲು ಗ್ರಾಮಸ್ಥರು ನಿರ್ಣಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT