ಸಂಗ್ರಹ ಚಿತ್ರ 
ರಾಜ್ಯ

ರಾಮನಗರ: ಜಮೀನು ಸಿಗಲಿಲ್ಲ ಎಂದು ತಾಯಿಯನ್ನೇ ಕೊಂದು ಶೌಚಗುಂಡಿಯಲ್ಲಿ ಹೂತಿಟ್ಟ ಮಗ!

ಜಮೀನು ವಿವಾದದಿಂದ ಉಂಟಾದ ಜಗಳದ ಕಾರಣ ಮಗನೊಬ್ಬ ತನ್ನ ತಾಯಿಯನ್ನೇ ಕೊಂದು ಶೌಚಾಲಯದಲ್ಲಿ ಹೂತಿಟ್ಟ ಅಮಾನುಷ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ರಾಮನಗರ: ಜಮೀನು ವಿವಾದದಿಂದ ಉಂಟಾದ ಜಗಳದ ಕಾರಣ ಮಗನೊಬ್ಬ ತನ್ನ ತಾಯಿಯನ್ನೇ ಕೊಂದು ಶೌಚಾಲಯದಲ್ಲಿ ಹೂತಿಟ್ಟ ಅಮಾನುಷ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ರಾಮನಗರದ  ಚೆನ್ನಪಟ್ಟಣದ ನಾಗವಾರ ಗ್ರಾಮದ ನಾಗಮ್ಮ (70) ಕೊಲೆಯಾದ ದುರ್ದೈವಿ. ಮಗ ಸುರೇಶ್ ತನ್ನ ತಾಯಿಯನ್ನು ಕಳೆದ ಮೂರು ದಿನಗಳ ಹಿಂದೆ ಕೊಂದದ್ದಲ್ಲದೆ ಆಕೆಯ ಶವವನ್ನು ಮನೆಯ ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ.
ಮೃತ ನಾಗಮ್ಮನ ಹೆಸರಿನಲ್ಲಿದ್ದ  10 ಗುಂಟೆ ಜಮೀನನ್ನು ತನ್ನ ಹೆಸರಿಗೆ ಬರೆದು ಕೊಡಬೇಕೆಂದು ಸುರೇಶ್ ಪಟ್ಟು ಹಿಡಿದಿದ್ದ. ಕಳೆದ ಹಲವು ದಿನಗಳಿಂದ ತಾಯಿ ಮಗನ ನಡುವೆ ಮನಸ್ತಾಪಕ್ಕೆ ಕಾರಣವಾಗಿದ್ದ ಈ ವಿಚಾರ ಮೂರು ದಿನಗಳ ಹಿಂದೆಯೂ ಜಗಳಕ್ಕೆ ಕಾರಣವಾಗಿತ್ತು. ಮದ್ಯ ಸೇವಿಸಿ ಮನೆಗೆ ಬಂದಿದ್ದ ಸುರೇಶ್ ಅಂದು ತನ್ನ ತಾಯಿ ಮೇಲೆ ಹಲ್ಲೆ ನಡೆಸಿದ್ದಾನೆ, ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ.
ಸಧ್ಯ ಎಂಕೆ ದೊಡ್ಡಿ ಪೋಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೌಚಗುಂಡಿಯಲ್ಲಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT