ಮುಷ್ಕರ ನಿರತ ವೈದ್ಯರು 
ರಾಜ್ಯ

ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಭಾರತೀಯ ವೈದ್ಯಕೀಯ ಪರಿಷತ್'ನ ತಿದ್ದುಪಡಿ ವಿಧೇಯಕ ವಿರೋಧಿಸಿ ಖಾಸಗಿ ವೈದ್ಯರು ದೇಶದಾದ್ಯಂತ ಇಂದು ಹೊರ ರೋಗಿ ಸೇವೆ ಬಹಿಷ್ಕರಿಸಿ ನಡೆಸಿದ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಭಾರತೀಯ ವೈದ್ಯಕೀಯ ಪರಿಷತ್'ನ ತಿದ್ದುಪಡಿ ವಿಧೇಯಕ ವಿರೋಧಿಸಿ ಖಾಸಗಿ ವೈದ್ಯರು ದೇಶದಾದ್ಯಂತ   ಇಂದು ಹೊರ ರೋಗಿ ಸೇವೆ ಬಹಿಷ್ಕರಿಸಿ ನಡೆಸಿದ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೂ ನಡೆದ ಬಂದ್  ವೇಳೆಯಲ್ಲಿ ಕೆಲ ದೊಡ್ಡ ಆಸ್ಪತ್ರೆಯ ಹೊರ ರೋಗಿ ಸೇವೆ ಮುಚ್ಚಲಾಗಿತ್ತು.  ಕೆಲವು ಕಡೆ ಚಿಕ್ಕ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಮ್ ಗಳ ಹೊರರೋಗಿ ವಿಭಾಗ ತೆರೆದಿತ್ತು. ಇದರಿಂದಾಗಿ ರೋಗಿಗಳು ಚಿಕಿತ್ಸೆ ದೊರೆಯದೆ ಪರದಾಡುವಂತಾಯಿತು.
ಚಾಮರಾಜಪೇಟೆಯ ಭಾರತೀಯ ವೈದ್ಯಕೀಯ ಮಂಡಳಿ  ಕಟ್ಟಡದಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯವರೆಗೂ ಭಾರತೀಯ ವೈದ್ಯಕೀಯ ಮಂಡಳಿ ಸದಸ್ಯರು ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಖಾಸಗಿ ಆಸ್ಪತ್ರೆ ವೈದ್ಯರ ಪ್ರತಿಭಟನೆಯಿಂದಾಗಿ ಸೂಕ್ತ ಚಿಕಿತ್ಸೆ ದೊರೆಯದೆ ನಿನ್ನೆಯಷ್ಟೇ ಜನಿಸಿದ ಮಗುವೊಂದು ಮೃತಪಟ್ಟಿರುವ ಬಗ್ಗೆ ಬೆಳಗಾವಿಯಲ್ಲಿ ವರದಿಯಾಗಿದ್ದು, ಈ ವಿಚಾರ ಸಂಬಂಧ ತನಿಖೆ ನಡೆಸುವುದಾಗಿ  ಭಾರತೀಯ ವೈದ್ಯಕೀಯ ಮಂಡಳಿಯ ರಾಜ್ಯಾಧ್ಯಕ್ಷ ಡಾ. ಹೆಚ್. ಎನ್. ರವೀಂದ್ರ ಹೇಳಿದ್ದಾರೆ.
ಬೆಂಗಳೂರಿನ ಶೇಷಾದ್ರಿಪುರಂ ಬಳಿ ಇರುವ ಅಪೊಲೊ ಆಸ್ಪತ್ರೆ ತೆರೆದಿತ್ತು. ಆದರೆ. ಹೊರ ರೋಗಿ ಸೇವೆಯ ವೈದ್ಯರು ಮುಷ್ಕರದಲ್ಲಿ  ಪಾಲ್ಗೊಂಡಿದ್ದರು.  ಆದರೆ, ತುರ್ತು ನಿಗಾ ಘಟಕದಲ್ಲಿದ್ದ ಒಬ್ಬ ವೈದ್ಯರು ಹಾಗೂ ಇಬ್ಬರು ನರ್ಸ್ ಗಳು   ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು.
 ಹೊರರೋಗಿ ವಿಭಾಗದ ವೈದ್ಯರು ಮುಷ್ಕರದಲ್ಲಿ ನಿರತರಾಗಿದ್ದರೂ  ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಯಲ್ಲಿ ಸೇವೆ ಮುಂದುವರೆದಿತ್ತು.  ತುರ್ತು ರೋಗಿಯ ಚಿಕಿತ್ಸೆಗಾಗಿ ಡಾಕ್ಟರ್ ವ್ಯವಸ್ಥೆ ಮಾಡಲಾಗಿತ್ತು.  ಉಳಿದವರು ಹೋಗಿ ಕೇಳಿದ್ದರೆ ಸಂಜೆ 6 ಗಂಟೆ ಅಥವಾ ಸೋಮವಾರ ನಂತರ ಬನ್ನಿ ಎಂದು ಹೇಳಲಾಗುತಿತ್ತು ಎಂದು 73 ವರ್ಷದ ವೃದ್ಧ ಸುಬ್ರಹ್ಮಣ್ಯ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT