ಸಂಗ್ರಹ ಚಿತ್ರ 
ರಾಜ್ಯ

ಆರ್ಥಿಕ ಅಪರಾಧ: ಟಿಡಿಪಿ ಎಂಎಲ್ಸಿ ವಿ. ನಾರಾಯಣ ರೆಡ್ಡಿಗೆ ಜಾಮೀನು ನಕಾರ

ರ್ನಾಟಕದ ಚುನಾಯಿತ ಸಂಸದರು / ಎಂಎಲ್ಎಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯವು ಆರ್ಥಿಕ ಅಪರಾಧ ಪ್ರಕರಣಕ್ಕೆ ....

ಬೆಂಗಳೂರು: ಕರ್ನಾಟಕದ ಚುನಾಯಿತ ಸಂಸದರು / ಎಂಎಲ್ಎಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯವು ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಎಮ್ಎಲ್ಸಿ ವೆಕಟಿ ನಾರಾಯಣ್ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ವಿಎನ್ಆರ್ ಇನ್ಫ್ರಾಸ್ಟ್ರಕ್ಚರ್ ವ್ಯವಸ್ಥಾಪಕ ನಿರ್ದೇಶಕ ರೆಡ್ಡಿ ಭಾರತ ಸರಕಾರದ ಕೈಗಾರಿಕಾ ಹಣಕಾಸು ನಿಗಮದ (ಐಎಫ್ಸಿಐ) ಲಿಮಿಟೆಡ್ ನ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿರುವ ವಿ. ಸಿ. ರಾಮ್ ಮೋಹನ್ ಅವರುಗಳ ಜಾಮೀನಿಗೆ ಕೋರ್ಟ್ ನಿರಾಕರಿಸಿದೆ.
ಸಿಬಿಐ ಹೇಳುವಂತೆ  2014-15ರ ಅವಧಿಯಲ್ಲಿ ಬೆಂಗಳೂರಿನ ಐಎಫ್ಸಿಐ ಲಿಮಿಟೆಡ್ ನ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿದ್ದ ರಾಮ್ ಮೋಹನ್ ಅವರು 190 ಕೋಟಿ ರೂಪಾಯಿ ಸಾಲವನ್ನುವಿಎನ್ ಆರ್ ಇನ್ಫ್ರಾಸ್ಟ್ರಕ್ಚರ್ಸ್. ನೀಡಿದ್ದ  ಭದ್ರತಾ ಪತ್ರಗಳ ಆಧಾರದ ಮೇಲೆ, ಮಂಜೂರು ಮಾಡಿದ್ದರು. ಆದರೆ ರೆಡ್ಡಿ ತಾವು ಪಡೆದ ಸಾಲವನ್ನು ಹಿಂತಿರುಗಿಸಿಲ್ಲ. 
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ ವಿ ವಿ ಪಾಟೀಲ್ ಇಬ್ಬರೂ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ರೆಡ್ಡಿ ಹಾಗೂ ರಾಮ್ ಮೋಹನ್ ಸಾಕ್ಷ್ಯ ನಾಶಕ್ಕೆ ಕೈಹಾಕುವ ಸಾಧ್ಯತೆ ಇರುವ ಕಾರಣ ಅವರಿಗೆ ಜಾಮೀನು ನೀಡಲಾಗುತ್ತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT