ಸಂಗ್ರಹ ಚಿತ್ರ 
ರಾಜ್ಯ

ಆರ್ಥಿಕ ಅಪರಾಧ: ಟಿಡಿಪಿ ಎಂಎಲ್ಸಿ ವಿ. ನಾರಾಯಣ ರೆಡ್ಡಿಗೆ ಜಾಮೀನು ನಕಾರ

ರ್ನಾಟಕದ ಚುನಾಯಿತ ಸಂಸದರು / ಎಂಎಲ್ಎಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯವು ಆರ್ಥಿಕ ಅಪರಾಧ ಪ್ರಕರಣಕ್ಕೆ ....

ಬೆಂಗಳೂರು: ಕರ್ನಾಟಕದ ಚುನಾಯಿತ ಸಂಸದರು / ಎಂಎಲ್ಎಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯವು ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಎಮ್ಎಲ್ಸಿ ವೆಕಟಿ ನಾರಾಯಣ್ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ವಿಎನ್ಆರ್ ಇನ್ಫ್ರಾಸ್ಟ್ರಕ್ಚರ್ ವ್ಯವಸ್ಥಾಪಕ ನಿರ್ದೇಶಕ ರೆಡ್ಡಿ ಭಾರತ ಸರಕಾರದ ಕೈಗಾರಿಕಾ ಹಣಕಾಸು ನಿಗಮದ (ಐಎಫ್ಸಿಐ) ಲಿಮಿಟೆಡ್ ನ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿರುವ ವಿ. ಸಿ. ರಾಮ್ ಮೋಹನ್ ಅವರುಗಳ ಜಾಮೀನಿಗೆ ಕೋರ್ಟ್ ನಿರಾಕರಿಸಿದೆ.
ಸಿಬಿಐ ಹೇಳುವಂತೆ  2014-15ರ ಅವಧಿಯಲ್ಲಿ ಬೆಂಗಳೂರಿನ ಐಎಫ್ಸಿಐ ಲಿಮಿಟೆಡ್ ನ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿದ್ದ ರಾಮ್ ಮೋಹನ್ ಅವರು 190 ಕೋಟಿ ರೂಪಾಯಿ ಸಾಲವನ್ನುವಿಎನ್ ಆರ್ ಇನ್ಫ್ರಾಸ್ಟ್ರಕ್ಚರ್ಸ್. ನೀಡಿದ್ದ  ಭದ್ರತಾ ಪತ್ರಗಳ ಆಧಾರದ ಮೇಲೆ, ಮಂಜೂರು ಮಾಡಿದ್ದರು. ಆದರೆ ರೆಡ್ಡಿ ತಾವು ಪಡೆದ ಸಾಲವನ್ನು ಹಿಂತಿರುಗಿಸಿಲ್ಲ. 
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ ವಿ ವಿ ಪಾಟೀಲ್ ಇಬ್ಬರೂ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ರೆಡ್ಡಿ ಹಾಗೂ ರಾಮ್ ಮೋಹನ್ ಸಾಕ್ಷ್ಯ ನಾಶಕ್ಕೆ ಕೈಹಾಕುವ ಸಾಧ್ಯತೆ ಇರುವ ಕಾರಣ ಅವರಿಗೆ ಜಾಮೀನು ನೀಡಲಾಗುತ್ತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT