ಸಾಂದರ್ಭಿಕ ಚಿತ್ರ 
ರಾಜ್ಯ

ಸೌದಿಯಲ್ಲಿ ನರ್ಸ್ ಅನುಮಾನಾಸ್ಪದ ಸಾವು, 15 ದಿನಗಳಲ್ಲಿ ಪಾರ್ಥಿವ ಶರೀರ ಉಡುಪಿಗೆ ತರುವ ಸಾಧ್ಯತೆ

ಜಿಲ್ಲೆಯ ಕುತ್ಯಾರ್ ಗ್ರಾಮದ ನರ್ಸ್ ಹಜೀಲ್ ಜ್ಯೂಸ್ನಾ ಮ್ಯಾಥಿಯಾಸ್ (28) ಕಳೆದ ವಾರ ಸೌದಿ ಅರಬೀಯಾದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, 15 ದಿನಗಳೊಳಗೆ ಭಾರತಕ್ಕೆ ಪಾರ್ಥಿವ ಶರೀರವನ್ನು ತರುವ ಸಾಧ್ಯತೆ ಇದೆ.

ಉಡುಪಿ: ಕಳೆದ ವಾರ ಸೌದಿ ಅರಬೀಯಾದಲ್ಲಿ  ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ  ಜಿಲ್ಲೆಯ ಕುತ್ಯಾರ್  ಗ್ರಾಮದ  ನರ್ಸ್  ಹಜೀಲ್ ಜ್ಯೂಸ್ನಾ ಮ್ಯಾಥಿಯಾಸ್ (28) ಪಾರ್ಥಿವ ಶರೀರವನ್ನು 15 ದಿನಗಳೊಳಗೆ ಭಾರತಕ್ಕೆ  ತರುವ ಸಾಧ್ಯತೆ ಇದೆ.

ಆಕೆಯ ಸಾವಿನ ಕುರಿತು ತನಿಖೆ ನಡೆಯುತ್ತಿರುವುದರಿಂದ ಮೃತದೇಹ ತರಲು ವಿಳಂಬವಾಗುತ್ತಿದೆ. ಆಕೆಯ ಸಾವು ಹೇಗೆ ಸಂಭವಿಸಿತ್ತು ಎಂದು ಇನ್ನೂ ನಿಗೂಢವಾಗಿದೆ. ಆದರೆ. ನಾವು ಈಗ ಆಕೆಯ ಪಾರ್ಥಿವ ಶರೀರವನ್ನು ಉಡುಪಿಗೆ ತರಲು ಪ್ರಯತ್ನಿಸುತ್ತಿರುವುದಾಗಿ  ಹಜೀಲ್ ಸಂಬಂಧ ಜೊಸೆಪ್  ಡಿಸೋಜಾ ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಮೂಲಕ ಸೌಧಿ ಅರಬೀಯಾದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿ  ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಧಿಕಾರಿಗಳನ್ನು ಸಂಪರ್ಕಿಸಿದ್ದು,  ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಸ್ಪತ್ರೆಯಿಂದ ಇನ್ನೂ ಪಾರ್ಥಿವ ಶರೀರವನ್ನು ನೀಡಲು  15 ದಿನಗಳ ಕಾಲ ಬೇಕಾಗುತ್ತದೆ ಎಂದು ರಾಯಭಾರಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಡಿಸೋಜಾ ಹೇಳಿದ್ದಾರೆ.

ಹಜೀಲ್ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕವಾಗಿ ದುರ್ಬಲ ಆಗಿರಲಿಲ್ಲ.  ಆಕೆಯ ಸಾವಿನ ಬಗ್ಗೆ ಭಾರತೀಯ ರಾಯಭಾರಿ ಅಧಿಕಾರಿಗಳಿಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಆಕೆಯ ಸಂಬಂಧಿಕರು  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT