ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ 
ರಾಜ್ಯ

ಪ್ರತ್ಯೇಕ ರಾಜ್ಯ ಕುರಿತು ಸಿಎಂ ಬಳಿ ಮಾತುಕತೆ ನಡೆಸಿ; ಬಂಡೆಪ್ಪ ಕಾಶೆಂಪುರ್

ಪ್ರತ್ಯೇಕ ರಾಜ್ಯ ಕುರಿತಂತೆ ಉತ್ತರ ಕರ್ನಾಟಕದ ನಾಯಕರು ದನಿ ಎತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಬಳಿ ಮಾತುಕತೆ ನಡೆಸಬೇಕು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಶನಿವಾರ ಹೇಳಿದ್ದಾರೆ...

ಬೆಂಗಳೂರು: ಪ್ರತ್ಯೇಕ ರಾಜ್ಯ ಕುರಿತಂತೆ ಉತ್ತರ ಕರ್ನಾಟಕದ ನಾಯಕರು ದನಿ ಎತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಬಳಿ ಮಾತುಕತೆ ನಡೆಸಬೇಕು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಶನಿವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಪ್ರತ್ಯೇಕ ರಾಜ್ಯ ಕೂಗು ಕುರಿತು ಚರ್ಚೆ ನಡೆಸಲು ಸಿದ್ಧರಾಗಿದ್ದಾರೆ. ಪ್ರತ್ಯೇಕ ರಾಜ್ಯ ಕುರಿತಂತೆ ಉತ್ತರ ಕರ್ನಾಟಕ ನಾಯಕರು ದನಿ ಎತ್ತಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಿಗೆ  ಅನ್ಯಾಯವಾಗಿರುವುದೇ ಆಗಿದ್ದರೆ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಬೇಕು ಎಂದು ಹೇಳಿದ್ದಾರೆ. 
ನಾಯಕರು ಇದ್ದಕ್ಕಿದ್ದಂತೆ ಪ್ರತ್ಯೇಕ ರಾಜ್ಯ ಕುರಿತಂತೆ ದನಿ ಎತ್ತಿ ಪ್ರತಿಭಟನೆ ನಡೆಸುವುದಕ್ಕೂ ಮುನ್ನ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಬೇಕು ಎಂದ ಅವರು ಆಗಸ್ಟ್ 2 ರಂದು ಉತ್ತರ ಕರ್ನಾಟಕ ಬಂದ್'ಗೆ ಕರೆ ನೀಡಿರುವ ಕುರಿತು ಮಾತನಾಡಿ, ಅಖಂಡ ಕರ್ನಾಟಕವನ್ನು ಇಬ್ಬಾಗ ಮಾಡಲು ಸಾಧ್ಯವಿಲ್ಲ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. 
ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಪಾಟೀಲ್ ತಮಗೆ ಅನ್ಯಾಯವಾಗಿದೆ ಎಂದು ತಿಳಿದಿರಬಹುದು. ಸಚಿವ ಸಂಪುಟ ರಚನೆಗೊಂಡ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ ಎದ್ದಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT