ಗುರುಪ್ರಸಾದ್ ಭಟ್ 
ರಾಜ್ಯ

ಮಣಿಪಾಲ: ಮಾರಕಾಸ್ತ್ರಗಳಿಂದ ಇರಿದು ಉದ್ಯಮಿಯ ಭೀಕರ ಕೊಲೆ

ಚಾಕು ಮತ್ತು ಮಾರಕಾಸ್ತ್ರಗಳಿಂದ ಇರಿದು ಉದ್ಯಮಿಯೊಬ್ಬರನ್ನು ಹಾಡಹಗಲೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಮಣಿಪಾಲ: ಚಾಕು ಮತ್ತು ಮಾರಕಾಸ್ತ್ರಗಳಿಂದ ಇರಿದು ಉದ್ಯಮಿಯೊಬ್ಬರನ್ನು ಹಾಡಹಗಲೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆ ಮಣಿಪಾಲದ ಪೆರಂಪಳ್ಳಿ ರಸ್ತೆಯಲ್ಲಿ ಗುರುಪ್ರಸಾದ್ ಭಟ್(46)  ಎನ್ನುವವರ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

ಮೃತರು ಉಡುಪಿಯ ಪುತ್ತೂರು ಗ್ರಾಮದ ನಿವಾಸಿಯಾಗಿದ್ದು ಉಡುಪಿಯಲ್ಲಿ ಪಬ್ ನಡೆಸುತ್ತಿದ್ದರು. ಶಾಸಕ ರಘುಪತಿ ಭಟ್ ಅವರ ಸಂಬಂಧಿ ಎನ್ನಲಾಗಿರುವ ಇವರು ಕೆಲ ವರ್ಷದ ಹಿಂದೆ "ಸತ್ಯ ನ್ಯೂಸ್" ಎನ್ನುವ ವಾರ ಪತ್ರಿಕೆಯನ್ನು ನಡೆಸುತ್ತಿದ್ದರು.

ಭಾನುವಾರ ಪೆರಂಪಳ್ಳಿ ಕ್ಲಬ್ ನಲ್ಲಿ ಇದ್ದ ಸಮಯ ನಾಲ್ವರು ದುಷ್ಕರ್ಮಿಗಳ ತಂಡ ಕ್ಲಬ್ ಗೆ ನುಗ್ಗಿ ಈ ಕೃತ್ಯ ನಡೆಸಿದೆ.

ಹಳೆಯ ದ್ವೇಷವೇ ಕೊಲೆಗೆ ಕಾರಣವಿರಬಹುದು ಎನ್ನಲಾಗಿದ್ದು ಮಣಿಪಾಲ ಪೋಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT