ಗುರುಪ್ರಸಾದ್ ಭಟ್ 
ರಾಜ್ಯ

ಮಣಿಪಾಲ: ಮಾರಕಾಸ್ತ್ರಗಳಿಂದ ಇರಿದು ಉದ್ಯಮಿಯ ಭೀಕರ ಕೊಲೆ

ಚಾಕು ಮತ್ತು ಮಾರಕಾಸ್ತ್ರಗಳಿಂದ ಇರಿದು ಉದ್ಯಮಿಯೊಬ್ಬರನ್ನು ಹಾಡಹಗಲೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಮಣಿಪಾಲ: ಚಾಕು ಮತ್ತು ಮಾರಕಾಸ್ತ್ರಗಳಿಂದ ಇರಿದು ಉದ್ಯಮಿಯೊಬ್ಬರನ್ನು ಹಾಡಹಗಲೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆ ಮಣಿಪಾಲದ ಪೆರಂಪಳ್ಳಿ ರಸ್ತೆಯಲ್ಲಿ ಗುರುಪ್ರಸಾದ್ ಭಟ್(46)  ಎನ್ನುವವರ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

ಮೃತರು ಉಡುಪಿಯ ಪುತ್ತೂರು ಗ್ರಾಮದ ನಿವಾಸಿಯಾಗಿದ್ದು ಉಡುಪಿಯಲ್ಲಿ ಪಬ್ ನಡೆಸುತ್ತಿದ್ದರು. ಶಾಸಕ ರಘುಪತಿ ಭಟ್ ಅವರ ಸಂಬಂಧಿ ಎನ್ನಲಾಗಿರುವ ಇವರು ಕೆಲ ವರ್ಷದ ಹಿಂದೆ "ಸತ್ಯ ನ್ಯೂಸ್" ಎನ್ನುವ ವಾರ ಪತ್ರಿಕೆಯನ್ನು ನಡೆಸುತ್ತಿದ್ದರು.

ಭಾನುವಾರ ಪೆರಂಪಳ್ಳಿ ಕ್ಲಬ್ ನಲ್ಲಿ ಇದ್ದ ಸಮಯ ನಾಲ್ವರು ದುಷ್ಕರ್ಮಿಗಳ ತಂಡ ಕ್ಲಬ್ ಗೆ ನುಗ್ಗಿ ಈ ಕೃತ್ಯ ನಡೆಸಿದೆ.

ಹಳೆಯ ದ್ವೇಷವೇ ಕೊಲೆಗೆ ಕಾರಣವಿರಬಹುದು ಎನ್ನಲಾಗಿದ್ದು ಮಣಿಪಾಲ ಪೋಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT