ಚಲಿಸುತ್ತಿದ್ದ ಆಟೋರಿಕ್ಷಾ ಮೇಲೆ ಆನೆಯ ಪ್ರತಾಪ: ಚಾಲಕ, ಪ್ರಯಾಣಿಕರು ಪ್ರಾಣಪಾಯದಿಂದ ಪಾರು 
ರಾಜ್ಯ

ಚಲಿಸುತ್ತಿದ್ದ ಆಟೋರಿಕ್ಷಾ ಮೇಲೆ ಆನೆಯ ಪ್ರತಾಪ: ಚಾಲಕ, ಪ್ರಯಾಣಿಕರು ಪ್ರಾಣಪಾಯದಿಂದ ಪಾರು

ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾ ಮೇಲೆ ಕಾಡನೆಯೊಂದು ದಾಳಿ ನಡೆಸಿರುವ ಘಟನೆ ಸಿದ್ದಾಪುರ ಸಮೀಪದ ಬಜೆಕೊಲ್ಲಿಯಲ್ಲಿ ಭಾನುವಾರ ನಡೆದಿದೆ...

ಮಡಿಕೇರಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾ ಮೇಲೆ ಕಾಡನೆಯೊಂದು ದಾಳಿ ನಡೆಸಿರುವ ಘಟನೆ ಸಿದ್ದಾಪುರ ಸಮೀಪದ ಬಜೆಕೊಲ್ಲಿಯಲ್ಲಿ ಭಾನುವಾರ ನಡೆದಿದೆ. 
ಕಾಡಾನೆ ದಾಳಿಗೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಚಾಲಕ ಹಾಗೂ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. 
ಮೊಹಮ್ಮದ್ ಎಂಬುವವರು ತಮ್ಮ ಆಟೋದಲ್ಲಿ ಇಬ್ಬರು ಪ್ರಯಾಣಿಕರನ್ನು ಬಜೆಕೊಲ್ಲಿಯಿಂದ ಸಿದ್ದಾಪುರ ಪಟ್ಟಣಕ್ಕೆ ಕರೆದೊಯ್ಯುತ್ತಿದ್ದರು. ಈ ವೇಳೆ ಆಲತೋಪು ಎಂಬಲ್ಲಿ ರಸ್ತೆಯ ಮಧ್ಯೆ ಕಾಡಾನೆಯ ಹಿಂಡು ದಿಢೀರ್ ಪ್ರತ್ಯಕ್ಷವಾಗಿದೆ. ಈ ವೇಳೆ ಗಾಬರಿಯಾದ ಚಾಲಕ, ಪ್ರಯಾಣಿಕರನ್ನು ಕರೆದುಕೊಂಡು ಆಟೋವನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾರೆ. 
ಈ ವೇಳೆ ರೋಷದಲ್ಲಿದ್ದ ಕಾಡನೆ ಹಿಂಡು ಆಟೋ ಮೇಲೆ ದಾಳಿ ನಡೆಸಿದೆ. ಬಳಿಕ ಸ್ಥಳೀಯ ಎಸ್ಟೇಟ್ ವೊಂದಕ್ಕೆ ಹೋಗಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. 
ಬಜ್ಜೆಕೊಲ್ಲಿ ಸ್ಥಳೀಯರು ಆರಣ್ಯ ಇಲಾಖೆಯ ಮೇಲೆ ಆರೋಪ ಮಾಡಿದ್ದು, ಸ್ಥಳೀಯ ಎಸ್ಟೇಟ್ ವೊಂದರ ಬಳಿ ಆನೆಗಳು ಬೀಡುಬಿಟ್ಟಿದ್ದವು. ಈ ಆನೆಗಳನ್ನು ಓಡಿಸಲು ಆರಣ್ಯ ಇಲಾಖೆಯ ಸಿಬ್ಬಂದಿ ಯತ್ನ ನಡೆಸುತ್ತಿದ್ದರು. ಈ ಬಗ್ಗೆ ಸ್ಥಳೀಯರಿಗೆ ಯಾವುದೇ ಮಾಹಿತಿಗಳಿರಲಿಲ್ಲ ಎಂದಿದ್ದಾರೆ. 
ಇನ್ನು ಆಟೋ ಚಾಲಕನಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸಿದ್ದಾಪುರದಲ್ಲಿ ಆನೆಗಳ ದಾಳಿ ಇತ್ತೀಚೆಗೆ ಸಾಮಾನ್ಯವಾಗಿ ಹೋಗಿದ್ದು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಹೊರಗೆ ಕಾಲಿಡಲು ಹೆದರುತ್ತಿದ್ದಾರೆಂದು ಆರೋಪಿಸಿದ್ದಾರೆ. 
ಎಸ್ಟೇಟ್ ಕಾರ್ಮಿಕರ ಮೇಲೆ ಆನೆ ದಾಳಿ
ಮಡಿಕೇರಿಯ ಗುಹ್ಯಾ ಗ್ರಾಮದಲ್ಲಿ ಆನೆಯೊಂದು ಇಬ್ಬರು ಕಾರ್ಮಿಕರ ಮೇಲೆ ದಾಳಿ ಮಾಡಿದ್ದು, ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. 
ಟಾಟಾ ಕಾಫಿ ಎಸ್ಟೇಟ್ ಕಾರ್ಮಿಕರಾಗಿರುವ ರಾಜಾ ಮತ್ತೊಬ್ಬ ಕಾರ್ಮಿಕನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಆನೆ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಹಠಾತ್ ಪ್ರವಾಹಕ್ಕೆ ಮನೆ ಕುಸಿತ- ಐವರ ಸಾವು: 1,337 ರಸ್ತೆಗಳು ಬಂದ್, 3 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

SCROLL FOR NEXT