ಸಿಎಂ ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ನಾವು ಸಾಯಬೇಕೆ ಇಲ್ಲ ಬದುಕಬೇಕೆ?; ಸಿಎಂ ಕುಮಾರಸ್ವಾಮಿಗೆ ನೊಂದ ರೈತನ ಪ್ರಶ್ನೆ

ಸಾಲ ಮರುಪಾವತಿಸುವಂತೆ ಸಹಕಾರಿ ಬ್ಯಾಂಕ್‍ನಿಂದ ಬಂದ ನೊಟೀಸ್ ನಿಂದ ನೊಂದ ರೈತ ಸಾಮಾಜಿಕ ...

ಮಂಡ್ಯ: ಸಾಲ ಮರುಪಾವತಿಸುವಂತೆ ಸಹಕಾರಿ ಬ್ಯಾಂಕ್‍ನಿಂದ ಬಂದ ನೊಟೀಸ್ ನಿಂದ ನೊಂದ ರೈತ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿರುವ ಘಟನೆ ನಡೆದಿದೆ. ತಮ್ಮ ಸಮಸ್ಯೆಗಳನ್ನು ಸಾಮಾಜಿಕ ಮಾಧ್ಯಮ ಮೂಲಕ ಹೊರಹಾಕುವವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ.

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹಕ್ಕಿಮಂಚನಹಳ್ಳಿ ಗ್ರಾಮದ ರೈತ ಹೊನ್ನೇಗೌಡ ಶೀಳನೆರೆ ಸಾಮಾಜಿಕ ಮಾಧ್ಯಮ ಮೂಲಕ ಆಕ್ರೋಶ ಹೊರಹಾಕಿದ ರೈತ. ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಕಳೆದ ವರ್ಷ ಆಗಸ್ಟ್ 9ರಂದು 60 ಸಾವಿರ ಬೆಳೆ ಸಾಲ ಪಡೆದಿದ್ದರು. ಇದೀಗ ರೈತ ಪಡೆದ ಸಾಲಕ್ಕೆ ನೋಟಿಸ್ ನೀಡಲಾಗಿದ್ದು, ಇದೇ ಆಗಸ್ಟ್ 9ರೊಳಗೆ  ಸಾಲ ಮರುಪಾವತಿಸಿ ಮುಂದೆ ಸಾಲ ಪಡೆಯಲು ಅರ್ಹತೆ ಪಡೆಯಿರಿ. ತಪ್ಪಿದರೆ ನಿಯಮದ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ನೋಟಿಸ್‍ನಲ್ಲಿ ಸೂಚಿಸಲಾಗಿದೆ.

ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡುತ್ತದೆ ಎಂದು ಮೀನಮೇಷ ಎಣಿಸುತ್ತಲೇ ಇದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು 2018 ಜುಲೈ 10ರವರೆಗೆ ರೈತರ ಸಾಲಮನ್ನಾ ಎಂದಿದ್ದಾರೆ. ಆದರೆ ಸಾಲ ಕಟ್ಟಿ, ಇಲ್ಲದಿದರೆ ಕಾನೂನಿನ ರೀತಿ ಕ್ರಮ ಕೈಗೊಳ್ಳುತ್ತೇನೆ ಎಂದು ನೋಟಿಸ್ ನೀಡಿದ್ದಾರೆ. ಈ ಸಂಕಷ್ಟದಲ್ಲಿ ರೈತ ಸಾಯಬೇಕ? ಬದುಕಬೇಕ? ರೈತನ ಬದುಕು ಅತಂತ್ರ ಮಾಡಿರುವ ಕುಮಾರಸ್ವಾಮಿಯವರೇ ಇದರ ಬಗ್ಗೆ ಯೋಚಿಸಬೇಕು ಎಂದು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ನೋವು, ಆಕ್ರೋಶಗಳನ್ನು ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT