ಸಾಂದರ್ಭಿಕ ಚಿತ್ರ 
ರಾಜ್ಯ

ಸಿಇಟಿ ಫಲಿತಾಂಶ ಪ್ರಟಕವಾದರೂ ಬಗೆಹರಿಯದ ಎಂಜಿನಿಯರಿಂಗ್ ಶುಲ್ಕ ನಿಗದಿ ಸಮಸ್ಯೆ

ಬಹುನಿರೀಕ್ಷಿತ 2018ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ ರಾಜ್ಯ ಸರ್ಕಾರ ...

ಬೆಂಗಳೂರು: ಬಹುನಿರೀಕ್ಷಿತ 2018ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ ರಾಜ್ಯ ಸರ್ಕಾರ ಎಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಇನ್ನೂ ನಿಗದಿಪಡಿಸಿಲ್ಲ. ಈ ವರ್ಷ ಶುಲ್ಕದಲ್ಲಿ ಶೇಕಡಾ 50ರಷ್ಟು ಹೆಚ್ಚಳ ಮಾಡುವಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಒತ್ತಾಯಿಸುತ್ತಿವೆ. ಇಂತಹ ಪರಿಸ್ಥಿತಿ ವಿದ್ಯಾರ್ಥಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಶುಲ್ಕವನ್ನು ಹೆಚ್ಚಿಸಿದರೆ ನನ್ನಂಥ ಸೀಟು ಆಕಾಂಕ್ಷಿಗಳಿಗೆ ಉತ್ತಮ ಕಾಲೇಜಿನಲ್ಲಿ ಸೀಟು ಸಿಗುವುದು ಕಷ್ಟವಾಗಲಿದೆ. ನಾನು ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದವನು. ಈ ಸಂದರ್ಭದಲ್ಲಿ ನನಗೆ ಏನೂ ನಿರ್ಧರಿಸಲು ಸಾಧ್ಯವಾಗುವುದಿಲ್ಲ ಎನ್ನುತ್ತಾರೆ ವಿದ್ಯಾರ್ಥಿಯೊಬ್ಬರು.

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳೊಂದಿಗೆ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಕುರಿತು ಅಂತಿಮ ನಿರ್ಧಾರಕ್ಕೆ ಬರಲು ಚುನಾವಣೆ ಮತ್ತು ಸರ್ಕಾರ ರಚನೆಯಿಂದಾಗಿ ವಿಳಂಬವಾಗಿದೆ. ಶುಲ್ಕ ನಿಗದಿ ಮತ್ತು ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಲು ಉನ್ನತ ಶಿಕ್ಷಣ ಸಚಿವರ ಅಗತ್ಯವಿರುತ್ತದೆ. ಸಚಿವ ಸಂಪುಟ ಇನ್ನೂ ರಚನೆಯಾಗಬೇಕಾಗಿರುವುದರಿಂದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಸರ್ಕಾರದ ಪ್ರತಿನಿಧಿಗಳ ಮಟ್ಟದ ಮಾತುಕತೆ ಇನ್ನೂ ಆಗಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಈ ಮಧ್ಯೆ ಖಾಸಗಿ ಎಂಜಿನಿಯರಿಂಗ್ ಕಾಲೇಜು ವ್ಯವಸ್ಥಾಪಕರು ಶೇಕಡಾ 50ರ ಶುಲ್ಕ ಹೆಚ್ಚಳ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ತಯಾರಿಲ್ಲ. ಕಳೆದ ವರ್ಷ ಕೂಡ ಸರ್ಕಾರ ಶುಲ್ಕ ಹೆಚ್ಚಳ ಮಾಡಿಲ್ಲ. ಈಗಿರುವ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ ಎನ್ನುತ್ತಾರೆ ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟದ ಕಾರ್ಯದರ್ಶಿ ಎಂಕೆ ಪಾಂಡುರಂಗ ಶೆಟ್ಟಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT