ಸಿಎಂ ಕುಮಾರಸ್ವಾಮಿ- ಇನ್ಫೋಸಿಸ್ ನಾರಾಯಣಮೂರ್ತಿ ಭೇಟಿ 
ರಾಜ್ಯ

ಸಿಎಂ ಕುಮಾರಸ್ವಾಮಿ- ಇನ್ಫೋಸಿಸ್ ನಾರಾಯಣಮೂರ್ತಿ ಭೇಟಿ, ಬೆಂಗಳೂರು ಅಭಿವೃದ್ಧಿ ಸಂಬಂಧ ಚರ್ಚೆ

ಬೆಂಗಳೂರು ನಗರದ ಅಭಿವೃದ್ಧಿ ಹಾಗು ತ್ಯಾಜ್ಯ ನಿರ್ವಹಣೆ ಸಂಬಂಧ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರೊಡನೆ ಚರ್ಚಿಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರದ ಅಭಿವೃದ್ಧಿ ಹಾಗು ತ್ಯಾಜ್ಯ ನಿರ್ವಹಣೆ ಸಂಬಂಧ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರೊಡನೆ ಚರ್ಚಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಜಯನಗರದ ನಾರಾಯಣಮೂರ್ತಿ ಅವರ ನಿವಾಸದಲ್ಲಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬೆಂಗಳೂರಿನ ಬೆಳವಣಿಗೆ ಸೇರಿ ನಾನಾ ವಿಚಾರದ ಕುರಿತಂತೆ ಮಾತುಕತೆ ನಡೆಇಸಿದ್ದಾರೆ.
ಬೆಂಗಳೂರಿನ  ಮೂಲ ಸೌಕರ್ಯ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ ಹಾಗೂ ಇನ್ನಿತರ ಮಹತ್ವದ ವಿಚಾರದಲ್ಲಿ ಸಮಿತಿ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸಲಹೆ ನಿಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಇನ್ಫೋಸಿಸ್ ನಾರಾಯಣಮೂರ್ತಿ ಅವರನ್ನು ಕೇಳಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಚನೆಯಾಗುವ ಈ ಸಮಿತಿ ಎರಡು ತಿಂಗಳಿಗೊಮ್ಮೆ ಸಭೆ ಸೇರಲಿದ್ದು ಪ್ರಗತಿ ಪರಿಶೀಲನೆ ಮಾಡಲಿದೆ. ನಾರಾಯಣಮೂರ್ತಿ ಮಾತನಾಡಿ "ನೀವು ಸದಾ ಜನಪರ ಕಾಳಜಿ ಇರಿಸಿಕೊಳ್ಳುತ್ತೀರಿ, ನಿರಂತರ ಕೆಲಸ ಮಾಡುತ್ತೀರಿ" ಎಂದು ಕುಮಾರಸ್ವಾಮಿ ಕಾರ್ಯವೈಖರಿಯನ್ನು ಹೊಗಳಿದ್ದಾರೆ.
ಕುಮಾರಸ್ವಾಮಿ ಇಸ್ರೇಲ್ ಗೆ ತೆರಳಿ ಅಲ್ಲಿನ ಕೃಷಿ ಪದ್ಧತಿ ಬಗ್ಗೆ ಅದ್ಯಯನ ನಡೆಸಿದ ಕುರಿತು ನಾರಾಯಣಸ್ವಾಮಿ ಮೆಚ್ಚುಗೆ ಸೂಚಿಸಿದ್ದಾರೆ..
ನಗರದ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಎನ್ ಜಿ ಓಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಅವರು ಸಲಹೆ ನಿಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಲಯಾಳಂ ನಟಿ ಮೇಲೆ ಹತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಡಿಕೆಶಿ ಅವಕಾಶ ಕೇಳಿದ್ರು, ಆದ್ರೆ CM ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸ್ಫೋಟಕ ಹೇಳಿಕೆ

ಬೆಳಗಾವಿ ಅಧಿವೇಶನ: ವಿಧಾಸಭೆ ಕಲಾಪ ಆರಂಭ; ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೆ ಕಥೆ!

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

SCROLL FOR NEXT