ಸಿಎಂ ಕುಮಾರಸ್ವಾಮಿ- ಇನ್ಫೋಸಿಸ್ ನಾರಾಯಣಮೂರ್ತಿ ಭೇಟಿ 
ರಾಜ್ಯ

ಸಿಎಂ ಕುಮಾರಸ್ವಾಮಿ- ಇನ್ಫೋಸಿಸ್ ನಾರಾಯಣಮೂರ್ತಿ ಭೇಟಿ, ಬೆಂಗಳೂರು ಅಭಿವೃದ್ಧಿ ಸಂಬಂಧ ಚರ್ಚೆ

ಬೆಂಗಳೂರು ನಗರದ ಅಭಿವೃದ್ಧಿ ಹಾಗು ತ್ಯಾಜ್ಯ ನಿರ್ವಹಣೆ ಸಂಬಂಧ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರೊಡನೆ ಚರ್ಚಿಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರದ ಅಭಿವೃದ್ಧಿ ಹಾಗು ತ್ಯಾಜ್ಯ ನಿರ್ವಹಣೆ ಸಂಬಂಧ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರೊಡನೆ ಚರ್ಚಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಜಯನಗರದ ನಾರಾಯಣಮೂರ್ತಿ ಅವರ ನಿವಾಸದಲ್ಲಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬೆಂಗಳೂರಿನ ಬೆಳವಣಿಗೆ ಸೇರಿ ನಾನಾ ವಿಚಾರದ ಕುರಿತಂತೆ ಮಾತುಕತೆ ನಡೆಇಸಿದ್ದಾರೆ.
ಬೆಂಗಳೂರಿನ  ಮೂಲ ಸೌಕರ್ಯ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ ಹಾಗೂ ಇನ್ನಿತರ ಮಹತ್ವದ ವಿಚಾರದಲ್ಲಿ ಸಮಿತಿ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸಲಹೆ ನಿಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಇನ್ಫೋಸಿಸ್ ನಾರಾಯಣಮೂರ್ತಿ ಅವರನ್ನು ಕೇಳಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಚನೆಯಾಗುವ ಈ ಸಮಿತಿ ಎರಡು ತಿಂಗಳಿಗೊಮ್ಮೆ ಸಭೆ ಸೇರಲಿದ್ದು ಪ್ರಗತಿ ಪರಿಶೀಲನೆ ಮಾಡಲಿದೆ. ನಾರಾಯಣಮೂರ್ತಿ ಮಾತನಾಡಿ "ನೀವು ಸದಾ ಜನಪರ ಕಾಳಜಿ ಇರಿಸಿಕೊಳ್ಳುತ್ತೀರಿ, ನಿರಂತರ ಕೆಲಸ ಮಾಡುತ್ತೀರಿ" ಎಂದು ಕುಮಾರಸ್ವಾಮಿ ಕಾರ್ಯವೈಖರಿಯನ್ನು ಹೊಗಳಿದ್ದಾರೆ.
ಕುಮಾರಸ್ವಾಮಿ ಇಸ್ರೇಲ್ ಗೆ ತೆರಳಿ ಅಲ್ಲಿನ ಕೃಷಿ ಪದ್ಧತಿ ಬಗ್ಗೆ ಅದ್ಯಯನ ನಡೆಸಿದ ಕುರಿತು ನಾರಾಯಣಸ್ವಾಮಿ ಮೆಚ್ಚುಗೆ ಸೂಚಿಸಿದ್ದಾರೆ..
ನಗರದ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಎನ್ ಜಿ ಓಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಅವರು ಸಲಹೆ ನಿಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT