ಕರ್ನಾಟಕ ಹೈಕೋರ್ಟ್ 
ರಾಜ್ಯ

ವೈಯುಕ್ತಿಕ ಹಿತಾಸಕ್ತಿಗಾಗಿ ಪಿಐಎಲ್ ಸಲ್ಲಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್

ವೈಯುಕ್ತಿಕ ಹಿತಾಸಕ್ತಿಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕೋರ್ಟ್ ಕಲಾಪದ ಅವಧಿ ವ್ಯರ್ಥ ಮಾಡಬಾರದೆಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಬೆಂಗಳೂರು: ವೈಯುಕ್ತಿಕ ಹಿತಾಸಕ್ತಿಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕೋರ್ಟ್ ಕಲಾಪದ ಅವಧಿ ವ್ಯರ್ಥ ಮಾಡಬಾರದೆಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಇಂತಹಾ ಅರ್ಜಿ ಸಲ್ಲಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ  ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಬಿ. ಎಸ್. ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠ  ಒಂದು ವರ್ಗದ ಜನರ ಸೇವೆಗಾಗಿ, ವೈಯುಕ್ತಿಕ ಉದ್ದೇಶಗಳಿಗೆ ಪಿಐಎಲ್ ಗಳನ್ನು ಸಲ್ಲಿಸಬಾರದೆಂದು ಹೇಳಿದ್ದಾರೆ.
ಇಂತಹಾ ಸಮಯದಲ್ಲಿ ಅರ್ಜಿದಾರರು ಕಾನೂನುಬದ್ದವಾದ ಬೇರೆ ಮಾರ್ಗ ಅನುಸರಿಸಬೇಕೆಂದು ನ್ಯಾಯಾಲಯ ಅರ್ಜಿದಾರರಿಗೆ ತಿಳಿ ಹೇಳಿದೆ.
ಮಂಗಳೂರು ನಗರದ ಮಾಜಿ ಶಾಸಕ ಮೊಯಿನುದ್ದೀನ್ ಬಾವಾ ಅವರ ಪತ್ನಿ ಹೆಸರಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಆರೊಪಿಸಿ ಸಲಿಕೆಯಾಗಿದ್ದ ಪಿಐಎಲ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ ಈ ಮೇಲಿನಂತೆ ಅಭಿಪ್ರಾಯಪಟ್ಟಿದೆ. 
ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್ ಸಲ್ಲಿಸಿದ್ದ ಈ ಅರ್ಜಿಯಲ್ಲಿ ಬಾವಾ ಪತ್ನಿ ನಗೀನಾ ಇಡ್ಯ ಗ್ರಾಮದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT