ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಒಂದು ಕಿಲೋಮೀಟರ್ ಒಳಗಡೆ ಸ್ಥಾಪಿತವಾಗಿರುವ 10ಕ್ಕೂ ಹೆಚ್ಚು ಗಣಿ ಕಂಪನಿಗಳ ಗುತ್ತಿಗೆಯನ್ನು ರದ್ದುಪಡಿಸುವಂತೆ ಅರಣ್ಯ ಇಲಾಖೆ ನೀಡಿರುವ ಶಿಫಾರಸ್ಸಿನಂತೆ ಈ ಕಂಪನಿಗಳನ್ನು ಮುಚ್ಚುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೋಟಿಸ್ ಜಾರಿಗೊಳಿಸಿದೆ.
ರಾಷ್ಟ್ರೀಯ ಉದ್ಯಾನವನ , ಹುಲಿ ಸಂರಕ್ಷಿತ ಪ್ರದೇಶದ 10 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಗಣಿಗಾರಿಕೆ ಚಟುವಟಿಕೆ ನಡೆಸುವಂತಿಲ್ಲ ಎಂಬ ಅರಣ್ಯ ಮತ್ತು ಪರಿಸರ ಸಚಿವಾಲಯದ ಆದೇಶದಂತೆ ಏಪ್ರಿಲ್ 26 ರಂದು ಐದು ಕಲ್ಲು ಗಣಿಗಾರಿಕೆಯ ಕಂಪನಿಗಳ ಕಾರ್ಯವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸ್ಥಗಿತಗೊಳಿಸಿದೆ.