ಸಾಂದರ್ಭಿಕ ಚಿತ್ರ 
ರಾಜ್ಯ

ನಾಡಿದ್ದು ಬೆಂಗಳೂರಿಗೆ ಮುಂಗಾರು ಪ್ರವೇಶಿಸುವ ನಿರೀಕ್ಷೆ

ನಾಳೆ ಅಥವಾ ನಾಡಿದ್ದು, ಬೆಂಗಳೂರಿಗೆ ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದೆ. ಇಂದೂ ಕೂಡಾ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು: ನಾಳೆ ಅಥವಾ ನಾಡಿದ್ದು, ಬೆಂಗಳೂರಿಗೆ  ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದೆ.  ಇಂದೂ ಕೂಡಾ ಬಿರುಗಾಳಿ ಸಹಿತ  ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ನಿನ್ನೆ ಮಧ್ಯಾಹ್ನದ ನಂತರ  ನಗರದಲ್ಲಿ ಸಾಧಾರಣ ಮಳೆಯಾಗಿದೆ.  ಮುಂಗಾರು ಪ್ರವೇಶಿಸಲು ಎರಡ್ಮೂರು ದಿನಗಳು ಬೇಕಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ  ಅಧಿಕಾರಿಗಳು ತಿಳಿಸಿದ್ದಾರೆ.
 ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ವೆಬ್ ಸೈಟ್  ಮಾಹಿತಿ ಪ್ರಕಾರ  ಇಂದು 6. 50 ಮಿಲಿ ಮೀಟರ್ ನಷ್ಟು ಮಳೆ ಬೀಳಲಿದೆ.  ಇಂದಿನಿಂದ ಬುಧವಾರದವರೆಗೂ  ಮೋಡ ಕವಿದ ವಾತಾವರಣವಿರಲಿದ್ದು,  ಒಂದೆರಡು ಸಲ ಮಳೆಯಾಗುವ ಸಾಧ್ಯತೆ  ಇದೆ.ಗುರುವಾರ ಮತ್ತು ಶುಕ್ರವಾರವೂ  ಮಳೆಯಾಗುವ ನಿರೀಕ್ಷೆ ಇದೆ.  
ಈ ಮಧ್ಯೆ ನಿನ್ನೆ ಸುರಿದ ಮಳೆಯಿಂದಾಗಿ  18 ಮರಗಳು  ಬಿದ್ದಿರುವ ಬಗ್ಗೆ ಬಿಬಿಎಂಪಿ ನಿಯಂತ್ರಣ ಕೊಠಡಿಗೆ ದೂರು ಬಂದಿದೆ.  ಕಂಟೋನ್ಮೆಂಟ್  ರೈಲ್ವೆ ನಿಲ್ದಾಣ, ಶಿವಾನಂದ ವೃತ್ತ, ಆನೇಪಾಳ್ಯ,  ಬಿಟಿಎಸ್ ರಸ್ತೆ,  ಮತ್ತಿತರ ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು,  43 ವಿದ್ಯುತ್ ಕಂಬಗಳು ನೆಲಕ್ಕುರುಳಿರುವ ಬಗ್ಗೆ ಬೆಸ್ಕಾಂನಲ್ಲಿ ದೂರು ದಾಖಲಾಗಿದೆ.
ರಸ್ತೆಗಳನ್ನು ತೆರವುಗೊಳಿಸಲು ನಾಗರಿಕ ರಕ್ಷಣಾ ತಂಡಗಳನ್ನು ನಿಯೋಜಿಸಲಾಯಿತು ಎಂಬ ಮಾಹಿತಿ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT