ಸೋಮಶೇಖರ್ ತಮ್ಮ ಪುತ್ರಿಯೊಂದಿಗೆ(ಸಂಗ್ರಹ ಚಿತ್ರ) 
ರಾಜ್ಯ

ಹುಟ್ಟುಹಬ್ಬ ಆಚರಿಸಿದ ಎರಡೇ ದಿನದಲ್ಲಿ ಜಲಪಾತದಲ್ಲಿ ಕೊಚ್ಚಿಹೋದ ವ್ಯಕ್ತಿ

ಕಳೆದ 2ನೇ ತಾರೀಕಿನಂದು ತಮ್ಮ 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಸೋಮಶೇಖರ್ ...

ಮೈಸೂರು: ಕಳೆದ 2ನೇ ತಾರೀಕಿನಂದು ತಮ್ಮ 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಸೋಮಶೇಖರ್ ಖುಷಿಯಲ್ಲಿ ಸ್ನೇಹಿತರೊಂದಿಗೆ ಕೆ ಆರ್ ತಾಲ್ಲೂಕಿನ ಚುಂಚನಕಟ್ಟೆ ಜಲಪಾತಕ್ಕೆ ತೆರಳಿದ್ದರು.

ಜಲಪಾತದ ನೀರಿಗಿಳಿದು ಆಟವಾಡುತ್ತಿರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು. ಇವರ ಮೃತದೇಹ ನಿನ್ನೆ ಸಿಕ್ಕಿದೆ. ಇವರು ಮೈಸೂರಿನ ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯ ಜೀವ ರಸಾಯನಶಾಸ್ತ್ರ ವಿಭಾಗದ (ಸಿಎಫ್ ಟಿಆರ್ ಐ) ಫೆಲೊ ಆಗಿದ್ದಾರೆ.

ಸೋಮಶೇಖರ್ ಅವರ ಪತ್ನಿ ಪ್ರತಿಮಾ ಮತ್ತು ಇಶಾನಿ ಹಾಗೂ ಅವರ ಕುಟುಂಬ ಸ್ನೇಹಿತ ವಿನಯ್ ಮತ್ತವರ ಮಗಳನ್ನು  ಸ್ಥಳೀಯರು ನೀರಿನಲ್ಲಿ ಕೊಚ್ಚಿ ಹೋಗುವುದರಿಂದ ಕಾಪಾಡಿದ್ದು ಸೋಮಶೇಖರ್ ಅವರನ್ನು ಕಾಪಾಡುವ ಪ್ರಯತ್ನ ಮಾತ್ರ ವಿಫಲವಾಯಿತು.

ಜಲಪಾತದಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ಈ ದುರಂತ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಿಕ್ಕಮಾರನಹಳ್ಳಿಯ ನೆಲಮಂಗಲ ಸಮೀಪದವರಾದ ಸೋಮಶೇಖರ್ ಕೆಲಸಕ್ಕೆ ಸೇರಿದ ಎರಡೇ ವರ್ಷಗಳಲ್ಲಿ ಹೆಚ್ಚು ಖ್ಯಾತಿ ಗಳಿಸಿದ್ದರು ಎಂದು ಸಿಎಫ್ ಟಿಆರ್ ಐ ವಿಭಾಗದ ಮುಖ್ಯ ವಿಜ್ಞಾನಿ ಸುಬ್ರಹ್ಮಣ್ಯನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT