ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 
ರಾಜ್ಯ

ಕಾಳಾ ಚಿತ್ರ ಕುರಿತ ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ; ಸಿಎಂ ಕುಮಾರಸ್ವಾಮಿ

ರಜನಿಕಾಂತ್ ಅಭಿನಯದ ಕಾಳಾ ಚಿತ್ರ ಪ್ರದರ್ಶನಕ್ಕೆ ಅಡ್ಡಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶ ನೀಡಿದ್ದು, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...

ಬೆಂಗಳೂರು: ರಜನಿಕಾಂತ್ ಅಭಿನಯದ ಕಾಳಾ ಚಿತ್ರ ಪ್ರದರ್ಶನಕ್ಕೆ ಅಡ್ಡಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶ ನೀಡಿದ್ದು, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ. 
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಹಾಗೂ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷಕೊಂದಿಗೆ ನಡೆಸಲಾದ ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಆದೇಶಕ್ಕೆ ತಲೆ ಬಾಗುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ. 
ಮುಖ್ಯಮಂತ್ರಿಯಾಗಿ ಅಲ್ಲದೆ ಕನ್ನಡಿಗನಾಗಿ ಹೇಳುವುದಾದರೆ, ಕಾಳಾ ಚಿತ್ರವನ್ನು ಬಿಡುಗಡೆ ಮಾಡದೆ ಇರುವುದೇ ಸೂಕ್ತ. ಇದರಿಂದ ಚಿತ್ರ ತಂಡವೇ ಹಿಂದೆ ಸರಿಯುವುದು ಉತ್ತಮ. ಚಿತ್ರ ಬಿಡುಗಡೆಗೆ ಕನ್ನಡ ಪರ ಸಂಘಟನೆಗಳು, ಸಿನಿಮಾ ಮಂಡಳಿಯ ವಿರೋಧವಿದೆ. ಒಂದು ವೇಳೆ ಚಿತ್ರವನ್ನು ಬಿಡುಗಡೆ ಮಾಡಿದರೂ ಅದರಿಂದಾಗುವ ನಷ್ಟ ಹಾಗೂ ಪರಿಣಾಮಗಳನ್ನು ಅವರೇ ಎದುರಿಸಬೇಕಾಗುತ್ತದೆ. ನಾನೊಬ್ಬ ಕನ್ನಡಿಗನಾಗಿ ನನ್ನ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT