ಕರ್ನಾಟಕ: ಯೋಧನ ಅಂತ್ಯಸಂಸ್ಕಾರದ ವೇಳೆ ಕೆಲ ಕಾಲ ಪ್ರಕ್ಷುಬ್ಧ ವಾತಾವರಣ 
ರಾಜ್ಯ

ಕರ್ನಾಟಕ: ಯೋಧನ ಅಂತ್ಯಸಂಸ್ಕಾರದ ವೇಳೆ ಕೆಲ ಕಾಲ ಪ್ರಕ್ಷುಬ್ಧ ವಾತಾವರಣ

ಅರುಣಾಚಲ ಪ್ರದೇಶದಲ್ಲಿ ಕೆಲ ದಿನಗಳ ಹಿಂದಷ್ಟೇ ಕುಸಿದು ಬಿದ್ದು ಮೃತಪಟ್ಟಿದ್ದ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಅರ್ಜುನ್ ಅಣ್ಣಿಗೇರಿ (32) ಅವರ ಅಂತಿಮ ಸಂಸ್ಕಾರ ನೆರವೇರಿಸಬೇಕಾದ ಸ್ಥಳದ ಬಗ್ಗೆ ಜಿಲ್ಲಾಡಳಿತ ಶೀಘ್ರ...

ಧಾರವಾಡ: ಅರುಣಾಚಲ ಪ್ರದೇಶದಲ್ಲಿ ಕೆಲ ದಿನಗಳ ಹಿಂದಷ್ಟೇ ಕುಸಿದು ಬಿದ್ದು ಮೃತಪಟ್ಟಿದ್ದ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಅರ್ಜುನ್ ಅಣ್ಣಿಗೇರಿ (32) ಅವರ ಅಂತಿಮ ಸಂಸ್ಕಾರ ನೆರವೇರಿಸಬೇಕಾದ ಸ್ಥಳದ ಬಗ್ಗೆ ಜಿಲ್ಲಾಡಳಿತ ಶೀಘ್ರ ಮತ್ತು ಸ್ಪಷ್ಟ ನಿರ್ಧಾರ ಕೈಗೊಳ್ಳದ ಕಾರಣ 2 ಗಂಟೆಗಳ ಕಾಲ ಪಾರ್ಥೀವ ಶರೀರವನ್ನು ಬಸ್ ನಿಲ್ದಾಣದಲ್ಲಿ ಇರಿಸಿದ ಘಟನೆ ಬುಧವಾರ ನಡೆದಿದೆ. 
ಅಂತಿಮ ಸಂಸ್ಕಾರಕ್ಕೆ ಅಧಿಕಾರಿಗಳು ಸ್ಥಳ ನಿಗದಿ ಮಾಡದ ಹಿನ್ನಲೆಯಲ್ಲಿ ಗ್ರಾಮದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿತ್ತು. ಕೊನೆಗೆ ಎಸ್'ಪಿ ಮಧ್ಯಪ್ರವೇಶಿಸಿ ಉಪ ಪೊಲೀಸ್ ಠಾಣೆ ಆವರಣದಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟು ಗೊಂದಲಕ್ಕೆ ತೆರೆ ಎಳೆದರು. 
ಯೋಧ ಅರ್ಜುನ್ ಅವರ ಪಾರ್ಥೀವ ಶರೀರವನ್ನು ಬೆಳಿಗ್ಗೆ 9.30ಕ್ಕೆ ಅಸ್ಸಾಂನಿಂದ ಕರೆತರಲಾಗಿತ್ತು. ಮೆರವಣಿಗೆ, ಸಾರ್ವಜನಿಕ ದರ್ಶನ ಮುಗಿದರೂ ಜಿಲ್ಲಾಡಳಿತ ಮಾತ್ರ ಅಂತ್ಯ ಸಂಸ್ಕಾರ ಎಲ್ಲಿ ನೆರವೇರಿಸಬೇಕು ಎಂಬುದರ ಬಗ್ಗೆ ಸ್ಪಷ್ಟ ನಿಲುವು ಪ್ರಕಟಿಸಿರಲಿಲ್ಲ. ಹೀಗಾಗಿ ತಮ್ಮ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಲು ಮೃತನ ಕುಟುಂಬ ನಿರ್ಧರಿಸಿತು. ಆದರೆ, ಇದಕ್ಕೆ ಗ್ರಾಮಗ ಕೆಲವರು ವಿರೋಧಿಸಿ ಸಾರ್ವಜನಿಕ ಸ್ಥಳ ಅದರಲ್ಲೂ ಬಸ್ ನಿಲ್ದಾಣದಲ್ಲೇ ಅಂತ್ಯ ಸಂಸ್ಕಾರಕ್ಕೆ ಒತ್ತಾಯಿಸಿದರು. 
ಆದರೆ, ಇದಕ್ಕೆ ಜಿಲ್ಲಾಡಳಿದ ಒಪ್ಪಲಿಲ್ಲ. ಅಷ್ಟೊತ್ತಿಗಾಗಲೇ ಯೋಧನ ಅಂತಿಮ ಯಾತ್ರೆ ಬಸ್ ನಿಲ್ದಾಣಕ್ಕೆ ಆಗಮಿಸಿತ್ತು. ನಮ್ಮನ್ನು ಬಂಧಿಸಿದರೂ ಬಸ್ ನಿಲ್ದಾಣದಲ್ಲೇ ಮಣ್ಣು ಮಾಡುತ್ತೇವೆಂದು ಮೆರವಣಿಗೆಯಲ್ಲಿದ್ದವರು ಪಟ್ಟು ಹಿಡಿದರು. ಆಗ ಎಸ್'ಪಿ ಸಂಗೀತ ಮಧ್ಯಪ್ರವೇಶಿಸಿ ಪೊಲೀಸ್ ಠಾಣಾ ಆವರಣದಲ್ಲಿಯೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT