ಕರ್ನಾಟಕ: ಯೋಧನ ಅಂತ್ಯಸಂಸ್ಕಾರದ ವೇಳೆ ಕೆಲ ಕಾಲ ಪ್ರಕ್ಷುಬ್ಧ ವಾತಾವರಣ 
ರಾಜ್ಯ

ಕರ್ನಾಟಕ: ಯೋಧನ ಅಂತ್ಯಸಂಸ್ಕಾರದ ವೇಳೆ ಕೆಲ ಕಾಲ ಪ್ರಕ್ಷುಬ್ಧ ವಾತಾವರಣ

ಅರುಣಾಚಲ ಪ್ರದೇಶದಲ್ಲಿ ಕೆಲ ದಿನಗಳ ಹಿಂದಷ್ಟೇ ಕುಸಿದು ಬಿದ್ದು ಮೃತಪಟ್ಟಿದ್ದ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಅರ್ಜುನ್ ಅಣ್ಣಿಗೇರಿ (32) ಅವರ ಅಂತಿಮ ಸಂಸ್ಕಾರ ನೆರವೇರಿಸಬೇಕಾದ ಸ್ಥಳದ ಬಗ್ಗೆ ಜಿಲ್ಲಾಡಳಿತ ಶೀಘ್ರ...

ಧಾರವಾಡ: ಅರುಣಾಚಲ ಪ್ರದೇಶದಲ್ಲಿ ಕೆಲ ದಿನಗಳ ಹಿಂದಷ್ಟೇ ಕುಸಿದು ಬಿದ್ದು ಮೃತಪಟ್ಟಿದ್ದ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಅರ್ಜುನ್ ಅಣ್ಣಿಗೇರಿ (32) ಅವರ ಅಂತಿಮ ಸಂಸ್ಕಾರ ನೆರವೇರಿಸಬೇಕಾದ ಸ್ಥಳದ ಬಗ್ಗೆ ಜಿಲ್ಲಾಡಳಿತ ಶೀಘ್ರ ಮತ್ತು ಸ್ಪಷ್ಟ ನಿರ್ಧಾರ ಕೈಗೊಳ್ಳದ ಕಾರಣ 2 ಗಂಟೆಗಳ ಕಾಲ ಪಾರ್ಥೀವ ಶರೀರವನ್ನು ಬಸ್ ನಿಲ್ದಾಣದಲ್ಲಿ ಇರಿಸಿದ ಘಟನೆ ಬುಧವಾರ ನಡೆದಿದೆ. 
ಅಂತಿಮ ಸಂಸ್ಕಾರಕ್ಕೆ ಅಧಿಕಾರಿಗಳು ಸ್ಥಳ ನಿಗದಿ ಮಾಡದ ಹಿನ್ನಲೆಯಲ್ಲಿ ಗ್ರಾಮದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿತ್ತು. ಕೊನೆಗೆ ಎಸ್'ಪಿ ಮಧ್ಯಪ್ರವೇಶಿಸಿ ಉಪ ಪೊಲೀಸ್ ಠಾಣೆ ಆವರಣದಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟು ಗೊಂದಲಕ್ಕೆ ತೆರೆ ಎಳೆದರು. 
ಯೋಧ ಅರ್ಜುನ್ ಅವರ ಪಾರ್ಥೀವ ಶರೀರವನ್ನು ಬೆಳಿಗ್ಗೆ 9.30ಕ್ಕೆ ಅಸ್ಸಾಂನಿಂದ ಕರೆತರಲಾಗಿತ್ತು. ಮೆರವಣಿಗೆ, ಸಾರ್ವಜನಿಕ ದರ್ಶನ ಮುಗಿದರೂ ಜಿಲ್ಲಾಡಳಿತ ಮಾತ್ರ ಅಂತ್ಯ ಸಂಸ್ಕಾರ ಎಲ್ಲಿ ನೆರವೇರಿಸಬೇಕು ಎಂಬುದರ ಬಗ್ಗೆ ಸ್ಪಷ್ಟ ನಿಲುವು ಪ್ರಕಟಿಸಿರಲಿಲ್ಲ. ಹೀಗಾಗಿ ತಮ್ಮ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಲು ಮೃತನ ಕುಟುಂಬ ನಿರ್ಧರಿಸಿತು. ಆದರೆ, ಇದಕ್ಕೆ ಗ್ರಾಮಗ ಕೆಲವರು ವಿರೋಧಿಸಿ ಸಾರ್ವಜನಿಕ ಸ್ಥಳ ಅದರಲ್ಲೂ ಬಸ್ ನಿಲ್ದಾಣದಲ್ಲೇ ಅಂತ್ಯ ಸಂಸ್ಕಾರಕ್ಕೆ ಒತ್ತಾಯಿಸಿದರು. 
ಆದರೆ, ಇದಕ್ಕೆ ಜಿಲ್ಲಾಡಳಿದ ಒಪ್ಪಲಿಲ್ಲ. ಅಷ್ಟೊತ್ತಿಗಾಗಲೇ ಯೋಧನ ಅಂತಿಮ ಯಾತ್ರೆ ಬಸ್ ನಿಲ್ದಾಣಕ್ಕೆ ಆಗಮಿಸಿತ್ತು. ನಮ್ಮನ್ನು ಬಂಧಿಸಿದರೂ ಬಸ್ ನಿಲ್ದಾಣದಲ್ಲೇ ಮಣ್ಣು ಮಾಡುತ್ತೇವೆಂದು ಮೆರವಣಿಗೆಯಲ್ಲಿದ್ದವರು ಪಟ್ಟು ಹಿಡಿದರು. ಆಗ ಎಸ್'ಪಿ ಸಂಗೀತ ಮಧ್ಯಪ್ರವೇಶಿಸಿ ಪೊಲೀಸ್ ಠಾಣಾ ಆವರಣದಲ್ಲಿಯೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT