ವಿವಿಧ ಜಿಲ್ಲೆಗಳಿಂದ ಬಂದಿದ್ದ ಬೆಂಬಲಿಗರು 
ರಾಜ್ಯ

ರಾಜಭವನದಲ್ಲಿ ನಾಯಕರ ಪ್ರಮಾಣವಚನ: ಬೆಂಬಲಿಗರ ಶೌಚಾಲಯವಾಯ್ತು ವಿಧಾನಸೌಧದ ಹುಲ್ಲು ಹಾಸು!

ಬುಧವಾರ ನಡೆದ ಸಂಪುಟ ವಿಸ್ತರಣೆಯಲ್ಲಿ ಶಾಸಕರು ರಾಜಭವನದಲ್ಲಿ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿ ಕುಮಾರ ಸ್ವಾಮಿ ಅವರ ...

ಬೆಂಗಳೂರು: ಬುಧವಾರ ನಡೆದ ಸಂಪುಟ ವಿಸ್ತರಣೆಯಲ್ಲಿ ಶಾಸಕರು ರಾಜಭವನದಲ್ಲಿ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿ ಕುಮಾರ ಸ್ವಾಮಿ ಅವರ ಸಂಪುಟ ಸೇರಿಕೊಂಡರು. 
ಆದರೇ ಇದೇ ವೇಳೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೋಡಲು ಬಂದಿದ್ದ ರಾಜಕೀಯ ನಾಯಕರುಗಳ ಬೆಂಬಲಿಗರು ವಿಧಾನ ಸೌಧದ ಆವರಣದಲ್ಲಿರುವ ಹುಲ್ಲು ಹಾಸನ್ನು ಸಾರ್ವಜನಿಕ ಶೌಚಾಲಯನ್ನಾಗಿ ಮಾರ್ಪಡಿಸಿದ್ದಾರೆ.
ವಿಧಾನಸೌಧದ ಪಕ್ಕದಲ್ಲಿರುವ ರಾಜಭವನ ರಸ್ತೆಯಲ್ಲಿ ಸಾವಿರಾರು ಬೆಂಬಲಿಗರು ಜಮಾಯಿಸಿದ್ದರು, ಆದರೆ ಅಕ್ಕಪಕ್ಕದಲ್ಲಿ ಎಲ್ಲಿಯೂ ಶೌಚಾಲಯ ವಿಲ್ಲದ ಕಾರಣ ವಿಧಾನವ ಸೌಧದ ಆವರಣದಲ್ಲಿರುವ ಹುಲ್ಲುಹಾಸನ್ನೇ ಶೌಚಾಲಯವನ್ನಾಗಿಸಿಕೊಂಡಿದ್ದಾರೆ.
ಭದ್ರತೆ ದೃಷ್ಠಿಯಿಂದ ವಿಧಾನೌಧದ ಒಳಗೆ ನಮಗೆ ಪ್ರವೇಶಿಸಲು ಬಿಡಲಿಲ್ಲ,ಅಕ್ಕಪಕ್ಕದಲ್ಲಿ ಕೇವಲ ಸ್ಚಾರ್ ಹೋಟೆಲ್ ಗಳು ಮಾತ್ರ ಇದ್ದವು. ಅಲ್ಲಿ ನಮಗೆ ಪ್ರವೇಶವಿರಲಿಲ್ಲ, ನಮ್ಮ ನೈಸರ್ಗಿಕ ಕರೆಯನ್ನು ಪೂರೈಸಿಕೊಳ್ಳಲು ಸಿಕ್ಕಿದ್ದು ಹುಲ್ಲುಹಾಸು ಎಂದು ಬೇರೆ ಜಿಲ್ಲೆಯಿಂದ ಬಂದಿದ್ದ ಮಹೇಶ್ ಚಂದ್ರ ಎಂಬವರು ಹೇಳಿದ್ದಾರೆ.
ರಾಜಕಾರಣಿಗಳ ಬೆಂಬಲಿಗರು ಬಂದಿದ್ದ ಕಾರುಗಳನ್ನು ರಾಜಭವನದ ಒಳಗೆ ಬಿಡಲಿಲ್ಲ. ಹಲವು ಕಾರುಗಳನ್ನು ಅಂಬೇಡ್ಕರ್ ವೀದಿಯಲ್ಲಿ ನಿಲ್ಲಿಸಲಾಗಿತ್ತು.  ಕೆಲವು ವಿಧಾನ ಸೌಧದ ಮುಂದೆ ಮತ್ತು ಜನರಲ್ ಪೋಸ್ಟ್ ಆಫೀಸ್ ಮುಂದೆ ಪಾರ್ಕಿಂಗ್ ಮಾಡಲಾಗಿತ್ತು. ಈ ಬಾಗದ ಹಲವು ರಸ್ತೆಗಳಲ್ಲಿ  ಡ್ರಾಫಿಕ್ ಜಾಮ್ ಉಂಟಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT