ಸಿಎಂ ಭೇಟಿ ಮಾಡಿದ ದಾವಣಗೆರೆ ಮಹಿಳೆ 
ರಾಜ್ಯ

ಜನತಾ ದರ್ಶನ: ಅಪಘಾತದಲ್ಲಿ ಕೈ ಕತ್ತರಿಸಿ ಹೋಗಿದ್ದ ಮಹಿಳೆಗೆ ಉದ್ಯೋಗದ ನೆರವು ನೀಡಿದ ಸಿಎಂ

ದಾವಣಗೆರೆಯಿಂದ ಬಂದಿದ್ದ ಶೈಲಾ ಎಂಬಾಕೆಯ ಬಲಕೈ ಕತ್ತಿರಿಸಿದ್ದು, ಮತ್ತೊಂದು ಕೈಯ್ಯಲ್ಲಿ ಧೈರ್ಯವಾಗಿ ಮಗುವನ್ನು ಎತ್ತಿಕೊಂಡು...

ಬೆಂಗಳೂರು: ಮುಖ್ಯಮಂತ್ರಿ ಅವರ ಜೆಪಿನಗರದ ಮನೆಯಲ್ಲಿ ನಡೆದ ಜನತಾ ದರ್ಶನದಲ್ಲಿ ದಾವಣೆಗೆರೆ ಮಹಿಳೆಯೊಬ್ಬರು ಕುಮಾರ ಸ್ವಾಮಿ ಅವರನ್ನು ಭೇಟಿ ಮಾಡಿದ ನಂತರ ಆಕೆಯ ಸಂತೋಷ ಇಮ್ಮಡಿಯಾಗಿದೆ.
ದಾವಣಗೆರೆಯಿಂದ ಬಂದಿದ್ದ ಶೈಲಾ ಎಂಬಾಕೆಯ ಬಲಕೈ ಕತ್ತಿರಿಸಿದ್ದು, ಮತ್ತೊಂದು ಕೈಯ್ಯಲ್ಲಿ ಧೈರ್ಯವಾಗಿ ಮಗುವನ್ನು ಎತ್ತಿಕೊಂಡು ಬಂದು ಸಿಎಂ ಭೇಟಿ ಮಾಡಿದರು.
ಇಲ್ಲಿಗೆ ಏಕೆ ಬಂದಿರುವುದಾಗಿ ಆಕೆಯನ್ನು ಸಿಎಂ ಪ್ರಶ್ನಿಸಿದರು. ಅದಕ್ಕುತ್ತರಿಸಿದ ಆಕೆ, ರಸ್ತೆ ಅಪಘಾತದಲ್ಲಿ ತಾನು ಬಲ ಕೈ ಕಳೆದುಕೊಂಡಿದ್ದು, ತಾನು ಟಾಪ್ ರೈಟಿಂಗ್ ಕಲಿತಿರುವುದಾಗಿ ತಿಳಿಸಿದ್ದಾರೆ, ತನಗೆ ಎಲ್ಲೂ ಕೆಲಸ ಸಿಗುತ್ತಿಲ್ಲ, ಜೊತೆಗೆ ಸರ್ಕಾರದ ಅಂಗವಿಕಲ ಪಿಂಚಣಿಯೂ ಬರುತ್ತಿಲ್ಲ ಎಂದು ಅಲವತ್ತುಕೊಂಡಿದ್ದಾರೆ.
ನಂತರ ಆಕೆಯನ್ನು ವಿಧಾನ ಸೌಧಕ್ಕೆ ಬರುವಂತೆ ಸಿಎಂ ಕುಮಾರ ಸ್ವಾಮಿ ಹೇಳಿದ್ದಾರೆ. ಜೊತೆಗೆ ದಾವಣಗೆರೆಯ ಅಧಿಕಾರಿಗಳಿಗೆ ಕರೆ ಮಾಡಿ  ಆಕೆಗೆ ತಾತ್ಕಾಲಿಕ ನೌಕರಿ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ. ಹಾಗೂ ಆಕೆಗೆ ಅಂಗವಿಕಲರ ಪಿಂಚಣಿ ನೀಡುವಂತೆಯೂ ಸೂಚಿಸಿದ್ದಾರೆ.
ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ವ್ಯವಸ್ಥೆಯಲ್ಲಿ ನಮಗೆ ಹಲವು ಅವಕಾಶಗಳಿವೆ, ಅಸಂಘಟನಾತ್ಮಕ ವಲಯದಲ್ಲಿಯೂ ಕೆಲಸದ ಅವಕಾಶಗಳಿವೆ, ನೀತಿ ನಿಯಮಗಳನ್ನು ವಿಸ್ತರಿಸಲು ಸರ್ಕಾರ ಸಿದ್ಧವಿರಬೇಕು. ರಾಜ್ಯದಲ್ಲಿ ಹಲವು ಮಂದಿ ಸದ್ದಿಲ್ಲದೇ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ, ಅಂತಹ ಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT