ಸಂಗ್ರಹ ಚಿತ್ರ 
ರಾಜ್ಯ

ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಎಬ್ಬಿಸಲು ಅಗ್ನಿಶಾಮಕ ಸಿಬ್ಬಂದಿಯ ಮೊರೆ ಹೋದ ಪೋಷಕರು! ಏನಿದು ಘಟನೆ?

ಪೋಷಕರ ಕರೆ ಹಿನ್ನಲೆಯಲ್ಲಿ ಮನೆಯಲ್ಲಿ ಮಲಗಿದ್ದ 12 ವರ್ಷದ ಬಾಲಕಿಯನ್ನು ಎಬ್ಬಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿರುವ ವಿಚಿತ್ರ ಘಟನೆ ಮಂಗಳೂರಿನಲ್ಲಿ ನಡೆದಿದೆ...

ಮಂಗಳೂರು: ಪೋಷಕರ ಕರೆ ಹಿನ್ನಲೆಯಲ್ಲಿ ಮನೆಯಲ್ಲಿ ಮಲಗಿದ್ದ 12 ವರ್ಷದ ಬಾಲಕಿಯನ್ನು ಎಬ್ಬಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿರುವ ವಿಚಿತ್ರ ಘಟನೆ ಮಂಗಳೂರಿನಲ್ಲಿ ನಡೆದಿದೆ. 
ಮಂಗಳೂರಿನ ಬಿಜೈನಲ್ಲಿರುವ ಅಪಾರ್ಟ್ ಮೆಂಟ್ ವೊಂದರಲ್ಲಿ ಈ ಘಟನೆ ನಡೆದಿದೆ. ಸಂಜೆ 4 ಗಂಟೆ ಸುಮಾರಿಗೆ ಮನೆಗೆ ಬಂದ ಬಾಲಕಿ ಮಲಗಿಕೊಂಡಿದ್ದಾಳೆ. ಕೆಲಸ ನಿಮಿತ್ತ 5 ಗಂಟೆ ಸುಮಾರಿಗೆ ತಾಯಿ ಹೊರಗಡೆ ಹೋಗಿದ್ದು ನಂತರ ಮನೆಗೆ ಮರಳಿದ ತಾಯಿ ಬಾಗಿಲು ಬಡಿದಿದ್ದಾರೆ. ಎಷ್ಟು ಬಡಿದರೂ ಬಾಗಿಲು ತೆಗೆಯದಿದ್ದರಿಂದ ಆಕೆ ಗಂಡನಿಗೆ ಕರೆ ಮಾಡಿ ಕರೆಸಿಕೊಂಡಿದ್ದಾರೆ. ಇಬ್ಬರು ಎಷ್ಟು ಸಲ ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ. 
ಈ ವೇಳೆ ಪೋಷಕರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಮನೆಗೆ ಬಂದ ಅವರು ನಾನಾ ಪ್ರಯತ್ನಗಳು ಮಾಡಿದ್ದು ಕೊನೆಗೆ ಬಾಲ್ಕನಿಯಿಂದ ಮನೆ ಒಳಗೆ ಹೋಗಿ ಮುಂಭಾಗದ ಬಾಗಿಲನ್ನು ತೆರೆದಿದ್ದಾರೆ. ಒಳ ಬಂದ ಪೋಷಕರು ಮಗಳನ್ನು ಎಬ್ಬಿಸಿದ್ದಾರೆ. ಮಗಳು ಗಾಢವಾಗಿ ನಿದ್ರೆಗೆ ಜಾರಿದ್ದರಿಂದ ಈ ಘಟನೆ ಸಂಭವಿಸಿದ್ದು ಬಾಲಕಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಮುಖ್ಯಸ್ಥ ಶಿವಶಂಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT