ಎಂ. ಮಹೇಶ್ವರ್ ರಾವ್, 
ರಾಜ್ಯ

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗಾಗಿ ಸಕಲ ಸಿದ್ಧತೆ

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ ಹಾಗೂ ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ ಹಾಗೂ ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಚುನಾವಣೆ ಕುರಿತಂತೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಆಯುಕ್ತ  ಎಂ. ಮಹೇಶ್ವರ್ ರಾವ್,  ಮತದಾನ ಜಾಗೃತಿ ಮೂಡಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ.  ವಾರ್ಡ್ ವಾರು ಆಟೋದೊಂದಿಗೆ   ಸಾರ್ವಜನಿಕರಿಗೆ ಅರಿವು ಮೂಡಿಸುವ ವ್ಯವಸ್ಥೆ ಮಾಡಲಾಗಿತ್ತು ಎಂದರು.

ಇವಿಎಂ ಮತ್ತು ವಿವಿಪ್ಯಾಟ್  ವ್ಯವಸ್ಥೆ ಕುರಿತಂತೆ ಮತದಾರರಿಗೆ ಶಿಕ್ಷಣ ನೀಡಲಾಗಿದೆ. ಇವುಗಳ ಬಳಕೆ ಕುರಿತಂತೆ ಸ್ವೀಪ್, ಹಾಗೂ ತರಬೇತುದಾರರು  ಸಾರ್ವಜನಿಕರಿಗೆ  ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ಮತದಾನದ ದಿನವೂ ಸಹ ಆಟೋದೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಸೋಮವಾರ ಬೆಳ್ಳಿಗೆ 7 ರಿಂದ ಸಂಜೆ 6 ರವರೆಗೂ ಮತದಾನ ನಡೆಯಲಿದ್ದು, ಬುಧವಾರ ಎಸ್ ಎಸ್ ಎಂ ಆರ್ ವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.  19 ಅಭ್ಯರ್ಥಿಗಳು ಕಣದಲ್ಲಿದ್ದು, 216 ಮತಗಟ್ಟೆಗಳ ಪೈಕಿ  ಐದು ಮತಗಟ್ಟೆಗಳನ್ನು ಸಖಿ ಪಿಂಕ್  ಮತಗಟ್ಟೆಗಳೆಂದು ಪರಿಗಣಿಸಲಾಗಿದ್ದು, ಅದರಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಇರಲಿದ್ದು, ಮಹಿಳೆಯರು  ಮಾತ್ರ ಮತ ಚಲಾಯಿಸುವಂತೆ ಅವಕಾಶ ಮಾಡಿಕೊಡಲಾಗುವುದು ಎಂದರು.

50  ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಕಲ್ಪಿಸಲಾಗುವುದು, ಸೂಕ್ಷ್ಮ ಮತಗಟ್ಟೆಗಳಲ್ಲಿ  60 ಸೂಕ್ಷ್ಮ ವೀಕ್ಷಕರನ್ನು  ನಿಯೋಜಿಸಲಾಗುವುದು, 51 ದಿವ್ಯಾಂಗ ಮತದಾರರಿದ್ದು, ಅವರಿಗೆ  ವೀಲ್ ಚೇರ್ ಸೌಕರ್ಯ ನೀಡಲಾಗುವುದು, ಮೊದಲ ಬಾರಿಗೆ ಮತಗಟ್ಟೆಯ ಸಿಬ್ಬಂದಿಗೆ  ಬೆಡ್, ತಲೆದಿಂಬು , ವೈದ್ಯಕೀಯ ಪೆಟ್ಟಿಗೆಯನ್ನು ಒದಗಿಸಲಾಗುತ್ತಿದೆ  ಎಂದು ರಾವ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT