ಸಂಗ್ರಹ ಚಿತ್ರ 
ರಾಜ್ಯ

ಸಿಂಧನೂರು ಬಳಿ ಟ್ರಾಕ್ಟರ್ ಪಲ್ಟಿ: ತಂದೆ, ಮಗ ಸೇರಿ ನಾಲ್ವರ ದುರ್ಮರಣ

ವಿದ್ಯುತ್ ಕಂಬಗಳನ್ನು ಸಾಗಿಸುತ್ತಿದ್ದಾಗ ಟ್ರಾಕ್ಟರ್ ಟ್ರಾಲಿ ಕೊಂಡಿ ಕಳಚಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ತಂದೆ ಮತ್ತು ಮಗ ಸೇರಿ ನಾಲ್ವರು ದಾರುಣ ಸಾವನ್ನಪ್ಪಿರುವ...

ಸಿಂಧನೂರು(ರಾಯಚೂರು): ವಿದ್ಯುತ್ ಕಂಬಗಳನ್ನು ಸಾಗಿಸುತ್ತಿದ್ದಾಗ ಟ್ರಾಕ್ಟರ್ ಟ್ರಾಲಿ ಕೊಂಡಿ ಕಳಚಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ತಂದೆ ಮತ್ತು ಮಗ ಸೇರಿ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಶ್ರೀರಾಂಪುರ ಕ್ರಾಸ್ ಬಳಿ ಸಂಭವಿಸಿದೆ. 
ಗಂಗಾವತಿ ತಾಲೂಕಿನ ಸುಳೆಕಲ್ ಗ್ರಾಮಸ್ಥರಾದ 35 ವರ್ಷದ ನಾಗರಾಜ, 25 ವರ್ಷದ ರಮೇಶ್, 19 ವರ್ಷದ ಶರಣಪ್ಪ ಮತ್ತು 20 ವರ್ಷದ ಮಲ್ಲಿಕಾರ್ಜುನ್ ಎಂದು ತಿಳಿದುಬಂದಿದೆ. 
ಸಿಂಧನೂರು ತಾಲೂಕಿನ ಸಾಸಲಮರಿ ಬಳಿ ವಿದ್ಯುತ್ ಕಂಬ ಹಾಕಲು ತೆರಳುತ್ತಿದ್ದಾಗ ಟ್ರಾಕ್ಟರ್ ನಲ್ಲಿದ್ದ ಕಂಬಗಳು ಒಂದೇ ಕಡೆ ವಾಲಿದ್ದರ ಪರಿಣಾಮ ಟ್ರಾಕ್ಟರ್ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT