ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ: ಆರೋಪಿ ನವೀನ್ ಕುಮಾರ್ ಪೊಲೀಸ್ ಕಸ್ಟಡಿ 14 ದಿನ ವಿಸ್ತರಣೆ

ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ...

ಬೆಂಗಳೂರು: ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕೆ ಟಿ ನವೀನ್ ಕುಮಾರ್ ನ ಪೊಲೀಸ್ ಕಸ್ಟಡಿ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಗೌರಿ ಲಂಕೇಶ್ ಹತ್ಯೆ ಕೇಸಿನ ವಿಚಾರಣೆಯಲ್ಲಿ ಆರೋಪಿ ನವೀನ್ ಕುಮಾರ್ ನಿಂದ ಮಹತ್ವದ ವಿಚಾರಗಳು ಬೆಳಕಿಗೆ ಬರುತ್ತಿದ್ದು, ಆತನನ್ನು ಇನ್ನಷ್ಟು ವಿಚಾರಣೆಗೊಳಪಡಿಸಲು ಕಾಲಾವಕಾಶ ಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಇನ್ನೂ 14 ದಿನಗಳ ಕಾಲ ಆತ ಪೊಲೀಸರ ವಶದಲ್ಲಿರಲಿದ್ದಾನೆ.

ಗೌರಿ ಲಂಕೇಶ್ ಹತ್ಯೆ ಸಂಬಂಧ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಮದ್ದೂರಿನ ಕೆ.ಟಿ.ನವೀನ್‌ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಹತ್ಯೆಗೆ ಒಳಸಂಚು ರೂಪಿಸಿದ್ದ ಆರೋಪದಡಿ ಬಂಧಿಸಿದ್ದರು. ಆತನನ್ನು ಕಳೆದ ಫೆಬ್ರವರಿ 16ರಂದು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ನಾಡ ಪಿಸ್ತೂಲ್, ಪಾಯಿಂಟ್ 32 ರಿವಾಲ್ವರ್ ಐದು ಗುಂಡುಗಳನ್ನು ಜಪ್ತಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT