ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ: ಆರೋಪಿ ನವೀನ್ ಕುಮಾರ್ ಪೊಲೀಸ್ ಕಸ್ಟಡಿ 14 ದಿನ ವಿಸ್ತರಣೆ

ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ...

ಬೆಂಗಳೂರು: ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕೆ ಟಿ ನವೀನ್ ಕುಮಾರ್ ನ ಪೊಲೀಸ್ ಕಸ್ಟಡಿ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಗೌರಿ ಲಂಕೇಶ್ ಹತ್ಯೆ ಕೇಸಿನ ವಿಚಾರಣೆಯಲ್ಲಿ ಆರೋಪಿ ನವೀನ್ ಕುಮಾರ್ ನಿಂದ ಮಹತ್ವದ ವಿಚಾರಗಳು ಬೆಳಕಿಗೆ ಬರುತ್ತಿದ್ದು, ಆತನನ್ನು ಇನ್ನಷ್ಟು ವಿಚಾರಣೆಗೊಳಪಡಿಸಲು ಕಾಲಾವಕಾಶ ಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಇನ್ನೂ 14 ದಿನಗಳ ಕಾಲ ಆತ ಪೊಲೀಸರ ವಶದಲ್ಲಿರಲಿದ್ದಾನೆ.

ಗೌರಿ ಲಂಕೇಶ್ ಹತ್ಯೆ ಸಂಬಂಧ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಮದ್ದೂರಿನ ಕೆ.ಟಿ.ನವೀನ್‌ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಹತ್ಯೆಗೆ ಒಳಸಂಚು ರೂಪಿಸಿದ್ದ ಆರೋಪದಡಿ ಬಂಧಿಸಿದ್ದರು. ಆತನನ್ನು ಕಳೆದ ಫೆಬ್ರವರಿ 16ರಂದು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ನಾಡ ಪಿಸ್ತೂಲ್, ಪಾಯಿಂಟ್ 32 ರಿವಾಲ್ವರ್ ಐದು ಗುಂಡುಗಳನ್ನು ಜಪ್ತಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT