ಸಂಗ್ರಹ ಚಿತ್ರ 
ರಾಜ್ಯ

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ: ರಾಜ್ಯ ಸರ್ಕಾರದ ಪ್ರಸ್ತಾವನೆ ವಾಪಸ್‌ ಸಾಧ್ಯತೆ

ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಹಿಂದೆ ಕಳಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ವಾಪಸು ಕಳುಹಿಸುವ ಸಾಧ್ಯತೆ ಇದೆ.

ನವದೆಹಲಿ: ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಹಿಂದೆ ಕಳಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ವಾಪಸು ಕಳುಹಿಸುವ ಸಾಧ್ಯತೆ ಇದೆ.
ರಾಜ್ಯಾದ್ಯಂತ ವ್ಯಾಪಕ ವಿವಾದಕ್ಕೆ ಕಾರಣವಾಗಿದ್ದ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದ ರಾಜ್ಯ ಸರ್ಕಾರದ ಶಿಫಾರಸ್ಸನ್ನು ಕೇಂದ್ರ ಸರ್ಕಾರ ವಾಪಸ್ ಕಳುಹಿಸುವ ಸಾಧ್ಯತೆ ಇದೆ ಎನ್ವಲಾಗಿದೆ. ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿರುವ ಕಾರಣ ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯ ವಾಪಸು ಕಳಿಸಿ ವಿಷಯವನ್ನು ಮರುಪರಿಗಣಿಸಿ ಹೊಸ ಪ್ರಸ್ತಾವನೆ ಕಳಿಸುವಂತೆ ಸೂಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ನೇತೃತ್ವದ ಈ ಹಿಂದಿನ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆಗಳಿಗೆ ಮುನ್ನ ಕಳುಹಿಸಿದ್ದ ಈ ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯ ಅಧ್ಯಯನ ಮಾಡಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ರವಾನಿಸಿತ್ತು. ರಾಜ್ಯಮಟ್ಟದಲ್ಲಿ ಈ ವಿಷಯ ಕುರಿತು ಮರುಪರಿಗಣಿಸುವ ಅಗತ್ಯವಿರುವ ಕಾರಣ ಪ್ರಸ್ತಾವನೆಯನ್ನು ವಾಪಸ್ ಕಳುಹಿಸುವಂತೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಗೃಹ ಸಚಿವಾಲಯಕ್ಕೆ ಸಲಹೆ ನೀಡಿತ್ತು.
ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡುವುದರಿಂದ ಮಹಾರಾಷ್ಟ್ರದಲ್ಲಿ ಬಹುತೇಕ ಲಿಂಗಾಯತ ಸಮುದಾಯದ ಕೆಲ ಉಪಜಾತಿಗಳಿಗೆ ನೀಡಲಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸ್ಥಾನಮಾನ ವಾಪಸ್ ಪಡೆಯಬೇಕಾಗಿ ಬರುತ್ತದೆ. ಈ ಅಂಶಗಳನ್ನು ಪರಿಗಣಿಸಿ ರಾಜ್ಯ ಸರ್ಕಾರ ತನ್ನ ಈ ಪ್ರಸ್ತಾವನೆಯನ್ನು ಮರುಪರಿಗಣಿಸಿ ಹೊಸದಾಗಿ ಕಳಿಸುವ ಅಗತ್ಯವಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ
ಅಭಿಪ್ರಾಯಪಟ್ಟಿದೆ. ಇದೇ ಕಾರಣಕ್ಕೆ ರಾಜ್ಯ ಸರ್ಕಾರದ ಪ್ರತ್ಯೇಕ ಧರ್ಮ ಪ್ರಸ್ತಾವ ವಾಪಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗಷ್ಟೇ ಲಿಂಗಾಯತ ಮತ್ತು ವೀರಶೈವ ಮಹಾಸಭದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರು, ಕೇಂದ್ರ ಸರ್ಕಾರದ ಪ್ರತ್ಯೇಕ ಧರ್ಮದ ಕಡತವನ್ನು ವಾಪಸ್ ಕಳುಹಿಸುವುದಾದರೆ ಸ್ವಾಗತಿಸುತ್ತೇನೆ ಎಂದು ಹೇಳಿದ್ದರು. ಅಂತೆಯೇ ಪ್ರತ್ಯೇಕ ಧರ್ಮ ವಿಚಾರ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಎಸ್ ಎಂ ಜಮಾದರ್ ಅವರ ವಿರುದ್ಧ ಹರಿಹಾಯ್ದರು. ಜಮಾದರ್ ಅವರು ತಾವು ಐಎಎಸ್ ಅಧಿಕಾರಿಯಾಗಿದ್ದಾಗ ಸಮುದಾಯಕ್ಕೆ ಏನೂ ಮಾಡಿಲ್ಲ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT