ಆತ್ಮಹತ್ಯೆಗೆ ಶರಣಾದ ಟೆಕ್ಕಿ 
ರಾಜ್ಯ

ಬೆಂಗಳೂರು: 12ನೇ ಮಹಡಿಯಿಂದ ಹಾರಿ ಟೆಕ್ಕಿ ಆತ್ಮಹತ್ಯೆ

ಸಾಫ್ಟ್‌ವೇರ್‌ ಎಂಜಿನೀಯರ್‌ ಒಬ್ಬರು ತಾವು ಕೆಲಸ ಮಾಡುವ ಕಂಪನಿ ಕಟ್ಟಡದ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ...

ಬೆಂಗಳೂರು: ಸಾಫ್ಟ್‌ವೇರ್‌ ಎಂಜಿನೀಯರ್‌ ಒಬ್ಬರು ತಾವು ಕೆಲಸ ಮಾಡುವ ಕಂಪನಿ ಕಟ್ಟಡದ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಐಟಿಪಿಎಲ್‌ನಲ್ಲಿ ನಡೆದಿದೆ. 
ಮಧ್ಯಪ್ರದೇಶ ಮೂಲದ ಭವೇಶ್‌ ಜೈಪಾಲ್‌ ಆತ್ಮಹತ್ಯೆ ಮಾಡಿಕೊಂಡವರು. ನ್ಯೂ ಸಿಗ್ಮಾ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು ಸೋಮವಾರ ಸಂಜೆ ಕೆಲಸದ ಅವಧಿ ಮುಗಿಯುವ ವೇಳೆಗೆ ಕಟ್ಟಡದ 12ನೇ ಮಹಡಿಗೆ ಲಿಫ್ಟ್‌ನಲ್ಲಿ ಹೋಗಿ ಅಲ್ಲಿಂದಲೇ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಹದ್ಯೋಗಿಗಳು ಪೊಲೀಸರಿಗೆ ತಿಳಿಸಿದ್ದಾರೆ,.
ಮೇಲಿನಿಂದ ಬಿದ್ದ ಶಬ್ದ ಕೇಳಿದ ತಕ್ಷಣ ಕಾವಲು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು. ಅಷ್ಟು ಹೊತ್ತಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು, ತಲೆಯಿಂದ ರಕ್ತಸ್ರಾವ ಆಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 23ವರ್ಷ ವಯಸ್ಸಿನ ಜೈಸ್ವಾಲ್‌ ಇನ್ನೂ ಅವಿವಾಹಿತರಾಗಿದ್ದರು ಇಂದಿರಾನಗರದಗಲ್ಲಿ ತಮ್ಮ ತಾಯಿ ಹಾಗೂ ಸಹೋದರಿಯೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ತಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ವೈಯುಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆತ್ಮಹತ್ಯೆಗೂ ಯಾರಿಗಾದರೂ ಸಂದೇಶ ಅಥವಾ ಇ-ಮೇಲ್‌ ಕಳುಹಿಸಿದ್ದಾರಾ ಎನ್ನುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. 
ಜತೆಯಲ್ಲಿ ಕೆಲಸ ಮಾಡುವ ಹಲವರಿಂದ ಮತ್ತು ಕಂಪನಿ ಎಚ್‌ಆರ್‌ ಕಡೆಯಿಂದ ಒಂದಷ್ಟು ಮಾಹಿತಿ ಸಂಗ್ರಹಿಸಿದ್ದೇವೆ. ಕಳೆದ ಒಂದೂವರೆ ವರ್ಷಗಳಿಂದ ಇವರು ಬೆಂಗಳೂರಿನಲ್ಲೇ ಕೆಲಸ ಮಾಡಿಕೊಂಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಪ್ರಕರಣ ದಾಖಲಿಸಿಕೊಂಡಿರವ ವೈಟ್  ಫೀಲ್ಡ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT