ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಹಿಳಾ ಕಾನ್ಸ್ ಟೇಬಲ್ ಮೇಲೆ ಅತ್ಯಾಚಾರ

ವಿವಾಹವಾಗುವುದಾಗಿ ಹೇಳಿ ವ್ಯಕ್ತಿಯೊಬ್ಬ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ ನಗರದ ಟ್ರಾಫಿಕ್ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಒಬ್ಬರು ದೂರು ದಾಖಲಿಸಿದ್ದಾರೆ. ಘಟನೆ ನಡೆದು ಎರಡು ವರ್ಷದ ನಂತರ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ವಿವಾಹವಾಗುವುದಾಗಿ ಹೇಳಿ  ವ್ಯಕ್ತಿಯೊಬ್ಬ ತನ್ನ ಮೇಲೆ  ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ ನಗರದ ಟ್ರಾಫಿಕ್  ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಒಬ್ಬರು    ದೂರು  ದಾಖಲಿಸಿದ್ದಾರೆ. ಘಟನೆ ನಡೆದು ಎರಡು ವರ್ಷದ ನಂತರ  ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮಿನ್  ಸಾಬ್   ತನ್ನ ಮೇಲೆ ಅತ್ಯಾಚಾರ ನಡೆಸಿದ್ದು, ಆತನ ಕುಟುಂಬ ಸದಸ್ಯರು ಅಪಮಾನ ಮಾಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.
2015ರಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗಾಗಿ  ವಿಜಯಪುರಕ್ಕೆ ಹೋಗಿದ್ದಾಗ  ತನ್ನಗೂ ಅಮಿನ್ ಗೂ ಪರಿಚಯವಾಗುತ್ತದೆ. ಅಲ್ಲಿಯೇ ವ್ಯಾಸಂಗ ಮಾಡುತ್ತಿದ್ದ ಅಮಿನ್  ಹತ್ತಿರವಾಗಿ, ಪ್ರೇಮಂಕುರವಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
2016ರಲ್ಲಿ ಅಮಿನ್  ಸಾಬ್  ಮದುವೆಯಾಗುವುದಾಗಿ ನಂಬಿಕೆ ಹುಟ್ಟಿಸಿದ್ದಲ್ಲದೇ,  ಬಲವಂತವಾಗಿ ದೈಹಿಕ ಸಂಪರ್ಕ ಕೂಡಾ  ನಡೆಸಿದ್ದಾನೆ. ಅದಕ್ಕೆ ಆಕೆ ಒಪ್ಪದಿದ್ದಾಗ ಹಲ್ಲೆ ಕೂಡಾ ಮಾಡಿದ್ದಾನೆ.  ಕೆಲ ತಿಂಗಳ ನಂತರ  ಬೆಂಗಳೂರಿಗೆ ಬಂದಿದ್ದ ಆತ ಮೆಜಿಸ್ಟಿಕ್ ನ ಲಾಡ್ಜ್ ವೊಂದರಲ್ಲಿ ಉಳಿದುಕೊಂಡು ಬರಬೇಕೆಂದು ಹೇಳಿದ್ದಾನೆ.  ಆಗ ಅಲ್ಲಿಗೆ ಹೋದಾಗ ಮದುವೆಯಾಗುವುದು ಹೇಳಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ.
ಆದರೆ, ತದನಂತರ ಅವರಿಬ್ಬರ ಮದುವೆಗೆ ಕುಟುಂಬದವರು ಒಪ್ಪುತ್ತಿಲ್ಲ  ಎಂದು ಹೇಳಲು ತೊಡಗಿದ್ದಾನೆ. ಮತ್ತೆ ಆತನನ್ನು ಸಂಪರ್ಕಿಸಿದ್ದಾಗ  ಜಾತಿ ಪ್ರಸ್ತಾಪಿಸಿ ನಿಂದಿಸಿದ್ದಾನೆ ಎಂದು ಮಹಿಳಾ ಕಾನ್ಸ್ ಟೇಬಲ್  ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT