ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಹಿಳಾ ಕಾನ್ಸ್ ಟೇಬಲ್ ಮೇಲೆ ಅತ್ಯಾಚಾರ

ವಿವಾಹವಾಗುವುದಾಗಿ ಹೇಳಿ ವ್ಯಕ್ತಿಯೊಬ್ಬ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ ನಗರದ ಟ್ರಾಫಿಕ್ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಒಬ್ಬರು ದೂರು ದಾಖಲಿಸಿದ್ದಾರೆ. ಘಟನೆ ನಡೆದು ಎರಡು ವರ್ಷದ ನಂತರ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ವಿವಾಹವಾಗುವುದಾಗಿ ಹೇಳಿ  ವ್ಯಕ್ತಿಯೊಬ್ಬ ತನ್ನ ಮೇಲೆ  ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ ನಗರದ ಟ್ರಾಫಿಕ್  ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಒಬ್ಬರು    ದೂರು  ದಾಖಲಿಸಿದ್ದಾರೆ. ಘಟನೆ ನಡೆದು ಎರಡು ವರ್ಷದ ನಂತರ  ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮಿನ್  ಸಾಬ್   ತನ್ನ ಮೇಲೆ ಅತ್ಯಾಚಾರ ನಡೆಸಿದ್ದು, ಆತನ ಕುಟುಂಬ ಸದಸ್ಯರು ಅಪಮಾನ ಮಾಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.
2015ರಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗಾಗಿ  ವಿಜಯಪುರಕ್ಕೆ ಹೋಗಿದ್ದಾಗ  ತನ್ನಗೂ ಅಮಿನ್ ಗೂ ಪರಿಚಯವಾಗುತ್ತದೆ. ಅಲ್ಲಿಯೇ ವ್ಯಾಸಂಗ ಮಾಡುತ್ತಿದ್ದ ಅಮಿನ್  ಹತ್ತಿರವಾಗಿ, ಪ್ರೇಮಂಕುರವಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
2016ರಲ್ಲಿ ಅಮಿನ್  ಸಾಬ್  ಮದುವೆಯಾಗುವುದಾಗಿ ನಂಬಿಕೆ ಹುಟ್ಟಿಸಿದ್ದಲ್ಲದೇ,  ಬಲವಂತವಾಗಿ ದೈಹಿಕ ಸಂಪರ್ಕ ಕೂಡಾ  ನಡೆಸಿದ್ದಾನೆ. ಅದಕ್ಕೆ ಆಕೆ ಒಪ್ಪದಿದ್ದಾಗ ಹಲ್ಲೆ ಕೂಡಾ ಮಾಡಿದ್ದಾನೆ.  ಕೆಲ ತಿಂಗಳ ನಂತರ  ಬೆಂಗಳೂರಿಗೆ ಬಂದಿದ್ದ ಆತ ಮೆಜಿಸ್ಟಿಕ್ ನ ಲಾಡ್ಜ್ ವೊಂದರಲ್ಲಿ ಉಳಿದುಕೊಂಡು ಬರಬೇಕೆಂದು ಹೇಳಿದ್ದಾನೆ.  ಆಗ ಅಲ್ಲಿಗೆ ಹೋದಾಗ ಮದುವೆಯಾಗುವುದು ಹೇಳಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ.
ಆದರೆ, ತದನಂತರ ಅವರಿಬ್ಬರ ಮದುವೆಗೆ ಕುಟುಂಬದವರು ಒಪ್ಪುತ್ತಿಲ್ಲ  ಎಂದು ಹೇಳಲು ತೊಡಗಿದ್ದಾನೆ. ಮತ್ತೆ ಆತನನ್ನು ಸಂಪರ್ಕಿಸಿದ್ದಾಗ  ಜಾತಿ ಪ್ರಸ್ತಾಪಿಸಿ ನಿಂದಿಸಿದ್ದಾನೆ ಎಂದು ಮಹಿಳಾ ಕಾನ್ಸ್ ಟೇಬಲ್  ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT