ಸಾಂದರ್ಭಿಕ ಚಿತ್ರ 
ರಾಜ್ಯ

ಫೇಸ್ ಬುಕ್ ನಲ್ಲಿ ಟ್ರಾವೆಲ್ ಸ್ಟೇಟಸ್ ಅಪ್ ಡೇಟ್: ಗಂಡಾಂತರ ತಂದಿಟ್ಟುಕೊಂಡ ಬೆಂಗಳೂರು ಮಹಿಳೆ!

ಆರ್ ಟಿ ನಗಗರ ನಿವಾಸಿಯೊಬ್ಬರು ಫೇಸ್ ಬುಕ್ ನಲ್ಲಿ ತಮ್ಮ ಪ್ರಯಾಣದ ವಿವರಗಳನ್ನು ಹಂಚಿಕೊಳ್ಳುವ ಮೂಲಕ ಸಮಸ್ಯೆ ತಂದಿಟ್ಟುಕೊಂಡಿದ್ದಾರೆ....

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ನಿಮ್ಮ ರಜೆಯ ವಿಷಯಗಳನ್ನು ಅಪ್ ಡೇಟ್ ಮಾಡುವ ಮುನ್ನ ಒಂದಲ್ಲ ಎರಡು ಬಾರಿ ಯೋಚಿಸಿ.
ಆರ್ ಟಿ ನಗಗರ ನಿವಾಸಿಯೊಬ್ಬರು ಫೇಸ್ ಬುಕ್ ನಲ್ಲಿ ತಮ್ಮ  ಪ್ರಯಾಣದ ವಿವರಗಳನ್ನು ಹಂಚಿಕೊಳ್ಳುವ ಮೂಲಕ ಸಮಸ್ಯೆತಂದಿಟ್ಟುಕೊಂಡಿದ್ದಾರೆ. 
ಆರ್ ಟಿ ನಗರ ಪ್ರೇಮಲತಾ ಎಂಬುವರು ತಮ್ಮ ಸಹೋದರ ಲೋಹಿತ್ ನೊಂದಿಗೆ  ವಾಸಿಸುತ್ತಿದ್ದಾರೆ. ರಜೆಯ ನಿಮಿತ್ತ ಅವರು ತಮ್ಮ ಕುಟುಂಬಸ್ಥರೊಂದಿಗೆ ತಮಿಳುನಾಡಿನ ದೇವಾಲಯಗಳಿಗೆ ತೆರಳಿದ್ದರು. ಈ ವೇಳೆ ಅವರು ಫೇಸ್ ಬುಕ್ ನಲ್ಲಿ  ತಾವು ಯಾವ್ಯಾವ ಸ್ಥಳಗಳಿಗೆ ಭೇಟಿ ನಿಡಿದ್ದರ ಬಗ್ಗೆ ಸ್ಟೇಟಸ್ ಅಪ್ ಡೇಟ್ ಮಾಡಿದ್ದರು.  
ಪ್ರವಾಸ ಮುಗಿಸಿ ಭಾನುವಾರ ರಾತ್ರಿ ಸುಮಾರು 2 ಗಂಟೆ ವೇಳೆಗೆ ಮನಗೆ ಬಂದಾಗ ಅವರಿಗೆ ಆಘಾತ ಕಾದಿತ್ತು, ಯಾರೋ ಮನೆ ಬಾಗಿಲು ಮುರಿದು, ಮನೆಯಲ್ಲಿದ್ದ  ಹಣ, ಒಡವೆ ಹಾಗೂ ದ್ವಿ ಚಕ್ರ ವಾಹನವನ್ನು ಕದ್ದೊಯ್ದಿದ್ದಾರೆ.
ಈ ಸಂಬಂಧ ಪ್ರೇಮಲತಾ, ಸೋಮವಾರ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, 5 ಲಕ್ಷ ಮೌಲ್ಯದ ಚಿನ್ನಾಭರಣ, 57 ಸಾವಿರ ರು ನಗದು ಕಳ್ಳತನವಾಗಿದೆ, ತಮ್ಮ ಫೇಸ್ ಬುಕ್ ಸ್ಚೇಟಸ್ ನೋಡಿ ತಾವಿಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಆಕೆ ಶಂಕಿಸಿದ್ದಾರೆ, 
ನೆರೆಮನೆಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾ ಕಾರ್ಯ ನಿರ್ವಹಿಸುತ್ತಿಲ್ಲದಿರುವುದು ಕಳ್ಳರಿಗೆ ಸಹಾಯವಾಗಿದೆ,ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಕೆಯ ಮನೆಯ ಸದಸ್ಯರನ್ನು ವಿಚಾರಣೆಗೊಳಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಾದ ಫೇಸ್ ಬುಕ್, ಟ್ವಿಟ್ಟರ್, ಇನ್ ಸ್ಟಾ ಗ್ರಾಂ ಬಳಕೆದಾರರು ತಮ್ಮ ವಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳುವ ಮುನ್ನ ಜಾಗೃತರಾಗಿರಬೇಕು,. ಇಲ್ಲದಿದ್ದರೇ ಅಪಾಯ ಕಟ್ಟಿಟ್ಟ ಬುತ್ತಿ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT