ಶಾಸಕ ಹರೀಶ್‌ ಪೂಂಜಾ ರಿಂದ ಸ್ಥಳ ಪರಿಶೀಲನೆ 
ರಾಜ್ಯ

ಚಾರ್ಮಾಡಿ ಘಾಟ್ ಮಣ್ಣು ತೆರೆವು, ಏಕಮುಖ ಸಂಚಾರ ಆರಂಭ

ಭಾರೀ ಮಳೆಗೆ ಒಂಭತ್ತು ಕಡೆ ಗುಡ್ಡ ಕುಸಿದು ಸೋಮವಾರ ಸಂಜೆಯಿಂದ ಸಂಚಾರ ಸ್ಥಗಿತವಾಗಿದ್ದ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಮಧ್ಯಾಹ್ನದಿಂದ ಏಕಮುಖ ಸಂಛಾರ ಪ್ರಾರಂಭವಾಗಿದೆ.

ಮಂಗಳೂರು: ಭಾರೀ ಮಳೆಗೆ ಒಂಭತ್ತು ಕಡೆ ಗುಡ್ಡ ಕುಸಿದು ಸೋಮವಾರ ಸಂಜೆಯಿಂದ ಸಂಚಾರ ಸ್ಥಗಿತವಾಗಿದ್ದ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಮಧ್ಯಾಹ್ನದಿಂದ ಏಕಮುಖ ಸಂಛಾರ ಪ್ರಾರಂಭವಾಗಿದೆ.
ಘಾಟ್  ರಸ್ತೆಯಲ್ಲಿ ಗುಡ್ಡ ಕುಸಿತದಿಂದ ರಸ್ತೆಗೆ ಬಿದ್ದಿದ್ದ ಮಣ್ಣು ಮತ್ತು ಮರಗಳ ತೆರವು ಕಾರ್ಯಾಚಣೆ ಭಾಗಷಃ ಪೂರ್ಣಗೊಂಡಿದೆ. ಇದಕ್ಕಾಗಿ 4 ಕ್ಕೂ ಹೆಚ್ಚು  ಜೆಸಿಬಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದವು. ಈಗ ಏಕಮುಖ ಸಂಚಾರ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ ಪಿ ಡಾ.ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.
ಎರಡು ದಿನ ಸಂಚಾರ ಸ್ಥಗಿತ
ಘಾಟ್  ರಸ್ತೆಯಲ್ಲಿರುವ ಮಣ್ಣು, ಮರಗಳ ತೆರವಿಗೆ ಇನ್ನೂ ಕಾಲಾವಕಾಶ ಬೇಕಾಗಿದೆ. ಹೀಗಾಗಿ ಇನ್ನೆರಡು ದಿನಗಳ ಕಾಲ ಘಾಟ್  ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ. 
ಘಟನಾ ಸ್ಥಳಕ್ಕೆ ಭೇಟಿ ನಿಡಿದ್ದ ಶಾಸಕ ಹರೀಶ್‌ ಪೂಂಜಾ ಸ್ಥಳ ಪರಿಶೀಲನೆ ನಡೆಸಿದ್ದು ಎರಡು ದಿನಗಳ ಕಾಲ ರಸ್ತೆ  ಸಂಚಾರ ಸ್ಥಗಿತಗೊಳಿಸಿ ಸಂಪೂರ್ಣ ತೆರವು ಕಾಮಗಾರಿ ನಡೆಸುವಂತೆ ಸೂಚಿಸಿದ್ದಾರೆ.
ಏತನ್ಮಧ್ಯೆ ಚಾರ್ಮಾಡಿ ಘಾಟ್  ನಲ್ಲಿ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಬಾರೀ ಮಳೆಗೆ ಚಾರ್ಮಾಡಿ ಘಾಟಿಯ ಸುಮಾರು ಒಂಭತ್ತು ಕಡೆಗಳಲ್ಲಿ ಗುಡ್ಡ ಕುಸಿತವಾಗಿತ್ತು. ಎರಡೂ ಕಡೆಗಳಲ್ಲಿ ಒಟ್ಟು 210 ವಾಹನಗಳು ರಸ್ತೆ ಮಧ್ಯೆ ಸಿಲುಕಿದ್ದವು. ಇದರಲ್ಲಿ ಸುಮಾರು 1,500 ಪ್ರಯಾಣಿಕರಿದ್ದರು. ಮಕ್ಕಳು, ಹಿರಿಯರು ಸೇರಿ ಅಪಾರ ಪ್ರಯಾಣಿಕರು ಆಹಾರ, ನೀರು, ಔಶಧಗಳಿಲ್ಲದೆ ಪರದಾಡಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಗ್ಗಂಟಿಗೆ ಸರ್ವಪಕ್ಷ ಒಗ್ಗಟ್ಟು: 'ರಾಜಕೀಯಕ್ಕಿಂತ ರಾಜ್ಯದ ಹಿತ ಮುಖ್ಯ' ಎಂದ CM ಡಿ.ಕೆ. ಶಿವಕುಮಾರ್

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!

'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಭಾರತ-ಚೀನಾ ಗಡಿ ವ್ಯಾಪಾರಕ್ಕೆ ಮರುಜೀವ: 6 ವರ್ಷಗಳ ಬಳಿಕ ನಾಥೂ ಲಾ ಗಡಿಯಲ್ಲಿ ವ್ಯಾಪಾರ ಚಟುವಟಿಕೆ ಪುನರಾರಂಭ..!

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ