ಡಿಸಿಎಂ ಡಾ. ಜಿ. ಪರಮೇಶ್ವರ್ 
ರಾಜ್ಯ

ಕಗ್ಗದಾಸಪುರ ಕೆರೆಯಲ್ಲಿ ಎಸ್ ಟಿಎಫ್ ಅಳವಡಿಕೆಗೆ ಡಿಸಿಎಂ ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ

ಕಗ್ಗದಾಸಪುರ ಕೆರೆಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವ ಡಾ. ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.

ಬೆಂಗಳೂರು: ಕಗ್ಗದಾಸಪುರ ಕೆರೆಯಲ್ಲಿ  ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು  ನಗರಾಭಿವೃದ್ದಿ ಸಚಿವ ಡಾ. ಜಿ. ಪರಮೇಶ್ವರ್  ಭರವಸೆ ನೀಡಿದ್ದಾರೆ.
ಅಧಿಕಾರಿಗಳೊಂದಿಗೆ ಕಗ್ಗದಾಸಪುರ ಕೆರೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಒತ್ತುವರಿ ಹಾಗೂ ಮಾಲಿನ್ಯ ನಿಯಂತ್ರಿಸಿ ಕೆರೆ  ಸಂರಕ್ಷಣೆಗೆ  ಸರ್ಕಾರ ಆದ್ಯತೆ ನೀಡಲಿದೆ ಎಂದರು.
ತ್ಯಾಜ್ಯ ನೀರು ಕೆರೆಗೆ  ಹರಿಯುವಿಕೆ ಹಾಗೂ ಒತ್ತುವರಿ ಕುರಿತಂತೆ ಸ್ಥಳೀಯ ನಿವಾಸಿಗಳು ಉಪಮುಖ್ಯಮಂತ್ರಿಗೆ  ಮಾಹಿತಿ ನೀಡಿದರು. 2016 ಫೆಬ್ರವರಿ ತಿಂಗಳಲ್ಲಿ ಕೆರೆ ಬಿಬಿಎಂಪಿಯಿಂದ ಬಿಡಿಗೆ ಒಳಪಟ್ಟಿತ್ತು. ಆದರೆ, 2018 ಮಾರ್ಚ್  ವರೆಗೂ ಬಿಬಿಎಂಪಿ ಕೆರೆಯ ಬಗ್ಗೆ ಯಾವುದೇ ಮೇಲ್ವಿಚಾರಣೆ ನಡೆಸಿಲ್ಲ ಎಂದು  ಕಗ್ಗದಾಸಪುರ ಕೆರೆ ಉಳಿಸಿ   ವೇದಿಕೆ ಸದಸ್ಯ ಆನಂದ್ ವಾಸುದೇವ್ ಹೇಳಿದರು.
ಬೆಂಗಳೂರಿನ ಬಹುತೇಕ ಕೆರೆಗಳು  ಒತ್ತುವರಿ ಹಾಗೂ  ಕಟ್ಟಡಗಳ ನಿರ್ಮಾಣದಿಂದಾಗಿ  ಮುಂಗಾರು ಮಳೆ ನೀರು ಸರಾಗವಾಗಿ ಹರಿಯದಂತಾಗಿದ್ದು, ತ್ಯಾಜ್ಯ ನೀರು ಹಾಗೂ ಒಳಚರಂಡಿ ನೀರು ಕೆರೆಗೆ ಹರಿಯದಂತೆ ತಡೆಗಟ್ಟಬೇಕು ಎಂದು ಪರಮೇಶ್ವರ್ ಅವರನ್ನು ವಾಸುದೇವ್  ಒತ್ತಾಯಿಸಿದರು.
ತ್ಯಾಜ್ಯ ನೀರು ಸಂಸ್ಕರಣಾ ಘಟಕ ಅಳವಡಿಕೆಗೆ ಸೂಕ್ತ ಸ್ಥಳ ಪರಿಶೀಲಿಸುವಂತೆ ಅಧಿಕಾರಿಗಳಿಗೆ  ನಿರ್ದೇಶಿಸಿದ ಪರಮೇಶ್ವರ್  ,ಇಂಹುದೇ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು  ಇನ್ನಿತರ ದೊಡ್ಡ ಕೆರಗಳಲ್ಲಿ ಅಳವಡಿಸಲಾಗುವುದು, ಸಂಸ್ಕರಣೆಗೊಂಡ ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಮಾಡಲಾಗುವುದು ಎಂದು  ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿ

'ಮತದಾರರ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡಲ್ಲ': ಮಮತಾ ಸರ್ಕಾರಕ್ಕೆ 'ಸುಪ್ರೀಂ' ಶಾಕ್

Sensex 485, Nifty 173 ಅಂಕ ಏರಿಕೆ, ಟೈಟನ್ ಷೇರು ಮೌಲ್ಯ ಶೇ.3%, ಅಲ್ಟ್ರಾಟೆಕ್ ಷೇರು ಮೌಲ್ಯ ಶೇ.2%ರಷ್ಟು ಏರಿಕೆ!

ಮೆಟ್ರೋ ಪ್ರಯಾಣ ದರ ಏರಿಕೆ ತಡೆದಿದ್ದು ನಾವೇ, ಕೇಂದ್ರ ಸರ್ಕಾರದ ಪಾತ್ರ ಇಲ್ಲ: DCM DK Shivakumar

ಸಂಸತ್ತಿನಲ್ಲಿ ಕೋಲಾಹಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ; ಲೋಕಸಭೆ ನಾಳೆಗೆ ಮುಂದೂಡಿಕೆ

SCROLL FOR NEXT