ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಭೂ ಕುಸಿತ 
ರಾಜ್ಯ

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ: ಪೊಲೀಸರಿಂದ ಪ್ರಯಾಣಿಕರಿಗೆ ಬಿಸ್ಕೆಟ್, ನೀರು ಪೂರೈಕೆ

ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬೃಹತ್ ಪ್ರಮಾಣದಲ್ಲಿ ಗುಡ್ಡ ಕುಸಿದು ನಿನ್ನೆ ...

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬೃಹತ್ ಪ್ರಮಾಣದಲ್ಲಿ ಗುಡ್ಡ ಕುಸಿದು ನಿನ್ನೆ ರಾತ್ರಿಯಿಂದ ಮಂಗಳೂರು-ಬೆಂಗಳೂರು ನಡುವೆ ವಾಹನ ಸಂಚಾರ ಸ್ಥಗಿತಗೊಂಡಿದ್ದು ಪೊಲೀಸರು ಪ್ರಯಾಣಿಕರ ನೆರವಿಗೆ ಧಾವಿಸಿದ್ದಾರೆ.

ರಸ್ತೆಗೆ ಬಿದ್ದಿರುವ ಕಲ್ಲು ಬಂಡೆಗಳು ಮತ್ತು ಮಣ್ಣನ್ನು ತೆಗೆಯಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಸತತ ಕಾರ್ಯೋನ್ಮುಖರಾಗಿದ್ದಾರೆ. ರಸ್ತೆ ಬದಿಯಲ್ಲಿ ನೂರಾರು ವಾಹನಗಳು ಚಲಿಸಲಾಗದೆ ನಿಂತಿವೆ. ಕೆಲ ದಿನಗಳಿಂದ ಸತತ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಗುಡ್ಡದಿಂದ ಮಣ್ಣು ಮತ್ತು ಬಂಡೆಗಳು ಕುಸಿದು ಬೀಳುತ್ತಿದ್ದು ಇಂದು ಬೆಳಗ್ಗೆ ಕೂಡ ಎರಡು ಕಡೆಗಳಲ್ಲಿ ಭೂ ಕುಸಿತವಾಗಿದೆ. ಘಾಟಿಯ ಎರಡು ಮತ್ತು ಮೂರನೇ ತಿರುವಿನಲ್ಲಿ ಭೂ ಕುಸಿತದಿಂದಾಗಿ ಸಂಚಾರ ನಿರ್ಬಂಧವಾಗಿದೆ.

ಪ್ರಯಾಣಿಕರಿಗೆ ಬಿಸ್ಕತ್ತು ಮತ್ತು ನೀರನ್ನು ಪೂರೈಸಲಾಗಿದೆ. ಮಕ್ಕಳು, ಹಿರಿಯ ವ್ಯಕ್ತಿಗಳು ಹಸಿವಿನಿಂದ ನರಳುತ್ತಿದ್ದಾರೆ. ರಸ್ತೆಯಿಂದ ಕಲ್ಲು ಮಣ್ಣುಗಳನ್ನು ಆದಷ್ಟು ಶೀಘ್ರವೇ ತೆರವುಗೊಳಿಸುವಲ್ಲಿ ನಿರತರಾಗಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ವರಿಷ್ಠ ರವಿಕಾಂತೇಗೌಡ ತಿಳಿಸಿದ್ದಾರೆ. ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರ್ಯನಿರತರಾಗಿದ್ದಾರೆ.

ರಸ್ತೆ ಕಾಮಾರಿ ಹಿನ್ನಲೆಯಲ್ಲಿ ಶಿರಾಡಿ ಘಾಟಿ ಕೂಡ ಸದ್ಯಕ್ಕೆ ಮುಚ್ಚಿರುವುದರಿಂದ ಸಂಚಾರ ದಟ್ಟಣೆ ಅಧಿಕವಾಗಿದೆ. ಚಾರ್ಮಾಡಿ ಘಾಟಿಗೆ ಬದಲು ಬೇರೆ ಮಾರ್ಗವನ್ನು ಮಂಗಳೂರಿನಿಂದ ಬೆಂಗಳೂರಿಗೆ ಹೋಗುವವರು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT